ಹೋರಾಟವೇ ಮಾಡದ ಬ್ರಾಹ್ಮಣರಿಗೆ ಶೇ.10 ರಷ್ಟು ಮೀಸಲಾತಿ: ಯತೀಂದ್ರ ಸಿದ್ದರಾಮಯ್ಯ ಅಸಮಾಧಾನ
ಚಾಮರಾಜನಗರ: ಕೇಂದ್ರ ಸರ್ಕಾರ ಯಾವುದೇ ಹೋರಾಟ ಮಾಡದೇ ಇರುವ ಬ್ರಾಹ್ಮಣರಿಗೆ ಶೇಕಡ 10ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಅತ್ಯಂತ ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದು, ಅತ್ಯಂತ ಹೆಚ್ಚಿನ ನಷ್ಟವಾಗಿರುವುದು ಕುರುಬ ಸಮುದಾಯಕ್ಕೆ ಎಂದು ವರುಣಾ ಕ್ಷೇತ್ರದ ಶಾಸಕ ಯತೀಂದ್ರ ಸಿದ್ದರಾಮಯ್ಯ ಸರ್ಕಾರಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಮುತ್ತಿಗೆ ಗ್ರಾಮದಲ್ಲಿ ಕನಕ ಯುವಕರ ಸೇನೆ ವತಿಯಿಂದ ನಡೆದ ಭಕ್ತ ಕನಕದಾಸರ 535ನೇ ಕನಕ ಜಯಂತೋತ್ಸವ ಕಾರ್ಯಕ್ರಮವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದುಳಿದ ವರ್ಗಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗದವರು ಶತಮಾನಗಳಿಂದ ಶೋಷಣೆಗೊಳಗಾದ ಸಮಾಜಗಳಿಗೆ ಮೀಸಲಾತಿ ನೀಡಲು ಪ್ರಯತ್ನ ಪಟ್ಟಾಗೆಲ್ಲ ವಿರೋಧ ವ್ಯಕ್ತಪಡಿಡಸಿದವರು ಆರ್ ಎಸ್ ಎಸ್ ಮತ್ತು ಬಿಜೆಪಿಯವರು. ಇವರು ಸನಾತನ ಧರ್ಮವನ್ನು ಪ್ರತಿಪಾತಿಸುವ ಮೂಲಕ ಅಂಬೇಡ್ಕರ್ ಅವರ ಸಂವಿಧಾನದ ಆಶಯಕ್ಕೆ ವಿರುದ್ದವಾಗಿದ್ದಾರೆ. ಯಾವುದೇ ಹೋರಾಟ ಮಾಡದ ಬ್ರಾಹ್ಮಣರಿಗೆ ಶೇ.10 ಮೀಸಲಾತಿ ನೀಡಿತ್ತು. ಆದರೆ, ಸತತ ಹೋರಾಟ ಮಾಡುತ್ತಿರುವ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡುವಲ್ಲಿ ತಾರತಮ್ಯ ಮಾಡುತ್ತಿವೆ. ಶೇ.4ರಷ್ಟು ಮೀಸಲಾತಿಯನ್ನು ಹೆಚ್ಚು ಜನಸಂಖ್ಯೆಯನ್ನು ಹೊಂದಿರುವು ಕುರುಬ ಸಮಾಜಕ್ಕೆ ನೀಡಲಾಗಿದೆ. ದೇಶದಲ್ಲಿ ಶೇ. 3ರಷ್ಟು ಜನಸಂಖ್ಯೆ ಹೊಂದಿರುವ ಬ್ರಾಹ್ಮಣರಿಗೆ ಶೇ. 10 ರಷ್ಟು ಮೀಸಲಾತಿಯನ್ನು ಯಾವ ಮಾನದಂಡದಲ್ಲಿ ನೀಡಲಾಯಿತು. ಅದನ್ನು ಪ್ರಶ್ನೆ ಮಾಡಿದರೆ, ಬಿಜೆಪಿ ಹಾಗೂ ಹಿಂದುತ್ವವಾದಿಗಳಲ್ಲಿ ಉತ್ತರವಿಲ್ಲ. ನ್ಯಾಯಾಲಯವು ಸಹ ಈ ಮೀಸಲಾತಿಯನ್ನು ಎತ್ತಿ ಹಿಡಿದಿದೆ ಎಂದರು.
ಈ ಹಿನ್ನೆಲೆಯಲ್ಲಿ ತಳ ಸಮುದಾಯಗಳು ಒಗ್ಗಟ್ಟು ಕಾಪಾಡಿಕೊಳ್ಳಬೇಕು. ಮುತ್ತಿಗೆ ಗ್ರಾಮದಲ್ಲಿ ಎಲ್ಲಾ ಸಮುದಾಯಗಳು ಒಗ್ಗಟ್ಟಿನಿಂದ ಅಂಬೇಡ್ಕರ್ ಹಾಗೂ ಕನಕ ಜಯಂತಿಯನ್ನು ಅಚರಣೆ ಮಾಡುವ ಮೂಲಕ ಮಾದರಿ ಗ್ರಾಮವಾಗಿದೆ. ಇತ್ತೀಚಿನ ದಿನಗಳಲ್ಲಿ ಓಬಿಸಿ ಹಾಗೂ ಎಸ್ಸಿ ಎಸ್ಟಿಗಳ ನಡುವೆ ಮೀಸಲಾತಿಗಾಗಿ ಕಂದಕ ನಿರ್ಮಾಣ ಮಾಡುವ ಹುನ್ನಾರ ನಡೆಯುತ್ತಿದೆ. ಇದು ನಿಲ್ಲಬೇಕು. ಕುರುಬರು ಎಸ್ಟಿ ಮೀಸಲಾತಿ ಕೇಳಿದರೆ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಎಸ್ಸಿ ಕೇಳಿದರೆ ಆ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂಬ ವಿರೋಧಾಭ್ಯಾಸಗಳು ಕೇಳಿಬರುತ್ತಿದೆ. ಹೀಗಾಗಿ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರು ಒಗ್ಗಟ್ಟು ಪ್ರದರ್ಶನ ಮಾಡುವ ಇಂಥ ಕೋಮುವಾದಿಗಳನ್ನು ಅಧಿಕಾರದಿಂದ ದೂರವಿಡಬೇಕು ಎಂದು ಯತೀಂದ್ರ ಸಲಹೆ ನೀಡಿದರು.
ಕೆ.ಆರ್. ನಗರದ ಕಾಗಿನೆಲೆ ಶಾಖಾ ಮಠದ ಕಿರಿಯ ಶ್ರೀಗಳಾದ ಅರುಣ ಸಿದ್ದೇಶ್ವರ ಸ್ವಾಮಿ ಸಾನ್ನಿಧ್ಯ ವಹಿಸಿ ಮಾತನಾಡಿ, ಮುತ್ತಿಗೆ ಗ್ರಾಮದ ಮುತ್ತಿನಂಥ ಗ್ರಾಮವಾಗಿದ್ದು, ಕನಕದಾಸರ ತತ್ವ ಅದರ್ಶಗಳನ್ನು ಮೈಗೂಡಿಸಿಕೊಂಡು ಎಲ್ಲಾ ವರ್ಗದವರ ಜೊತೆಗೆ ಅನ್ಯೋನ್ಯತೆಯಿಂದ ನಡೆಯುತ್ತಿದೆ. ಗ್ರಾಮದಲ್ಲಿರುವ ಎಲ್ಲರು ಸಹ ವೈಯಕ್ತಿಕ ಭಿನ್ನಾಪ್ರಾಯವನ್ನು ಬಿಟ್ಟು ಗ್ರಾಮದ ಅಭಿವೃದ್ದಿಯತ್ತ ಗಮನ ಕೊಡಿ ಮಕ್ಕಳನ್ನು ವಿದ್ಯಾವಂತರನನ್ನಾಗಿ ಮಾಡಿ, ಸಮಾಜದ ಮುಖ್ಯವಾಹಿನಿ ಬರಬೇಕು ಎಂದರು.
ಬಿಎಸ್ಪಿ ಮುಖಂಡಅರಕಲವಾಡಿ ನಾಗೇಂದ್ರ ಮುಖ್ಯ ಭಾಷಣ ಮಾಡಿ, ಸಿದ್ದರಾಮಯ್ಯ ಅವರ ಕೊಡುಗೆ ಮತ್ತು ಓಬಿಸಿ ಮತ್ತು ಎಸ್ಸಿ ಎಸ್ಟಿ ಸಮುದಾಯಗಳು ಹೊಂದಾದರೆ ಮಾತ್ರ ಸವಲತ್ತು ಪಡೆದುಕೊಳ್ಳಲು ಸಾಧ್ಯ. ಅಂಬೇಡ್ಕರ್ ಅವರ ಸಂವಿಧಾನವನ್ನು ಅಶಯವನ್ನು ಈಡೇರಿಸಲು ಸಾಧ್ಯವಿದೆ ಎಂದರು.
ವೇದಿಕೆಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಸಮಾಜದ ಬಂಧುಗಳನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ತಾಲೂಕು ಕುರುಬ ಸಂಘದ ಅಧ್ಯಕ್ಷ ಸಿ.ಎನ್. ಬಾಲರಾಜು, ಉಪಾಧ್ಯಕ್ಷ ಉಮೇಶ್, ಗೌರವಧ್ಯಕ್ಷ ಸೋಮಣ್ಣೇಗೌಡ, ಪ್ರದೇಶದ ಕುರುಬರ ಸಂಘ ಅಧ್ಯಕ್ಷ ಸುಬ್ರಮಣ್ಯ, ಮುಖಂಡರಾದ ವಕೀಲೆ ಜಿ. ನಾಗಶ್ರೀಪ್ರತಾಪ್, ಎಚ್.ಎಂ. ಗಣೇಶ ಪ್ರಸಾದ್, ಕುರುಬರ ಸಂಘದ ನಿರ್ದೇಶಕ ಜೆ. ಗೋಪಿ. ಎಪಿಎಂಸಿ ಅಧ್ಯಕ್ಷ ಎಂ.ಬಿ. ಗುರುಸ್ವಾಮಿ, ಜಿಲ್ಲಾ ಕಸಾಪ ಉಪಾಧ್ಯಕ್ಷ ಮಾದಾಪುರ ರವಿಕುಮಾರ್, ಹೆಗ್ಗೋಠಾರ ಗ್ರಾ.ಪಂ. ಅಧ್ಯಕ್ಷೆ ದೀಪ ಸಂತೋಷ, ಸದಸ್ಯರಾದ ಡಿ. ಮಂಜು, ಅಂಬಿಕಾ ವಿಲ್ಸನ್, ಪಿಡಿಓ ಮಾದಪ್ಪ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ನಂಜೇಗೌಡ, ಉಪಾಧ್ಯಕ್ಷ ಬಸಪ್ಪನಪಾಳ್ಯ ನಟರಾಜು, ಮಾಜಿ ಅಧ್ಯಕ್ಷ ಜನ್ನೂರು ಮಹದೇವ್, ಮಾಜಿ ಅಧ್ಯಕ್ಷ ಬಸಪ್ಪನಪಾಳ್ಯ ರಾಜಶೇಖರ್, ಕನಕ ನೌಕರರ ಸಂಘದ ಅಧ್ಯಕ್ಷ ನಿಂಗೇಗೌಡ, ಮುತ್ತಿಗೆ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಕಮಿಟಿಯ ಬಸವರಾಜು, ಜವರೇಗೌಡ, ಶಿವಲಿಂಗೇಗೌಡ, ಬೆಳ್ಳೇಗೌಡ, ನಾಗೇಶ್, ಮುತ್ತಿಗೆ ಮೂರ್ತಿ, ಮುತ್ತಿಗೆ ದೊರೆ, ಕರಿನಂನಪುರ ಸ್ವಾಮಿ, ಹಳೇಪುರ ಬಸವಣ್ಣ, ಶಿಕ್ಷಕ ಬಸವರಾಜು ಇತರರು ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka