ಗಡ್ಡಧಾರಿಗಳಿಗೆ ಸಿಹಿ ಸುದ್ದಿ: ಮುಂದಿನ ಅವಧಿಯಲ್ಲಿ ನೀವೂ ಸಿಎಂ ಆಗುವ ಸಾಧ್ಯತೆ ಇದೆ! - Mahanayaka
12:27 PM Friday 20 - September 2024

ಗಡ್ಡಧಾರಿಗಳಿಗೆ ಸಿಹಿ ಸುದ್ದಿ: ಮುಂದಿನ ಅವಧಿಯಲ್ಲಿ ನೀವೂ ಸಿಎಂ ಆಗುವ ಸಾಧ್ಯತೆ ಇದೆ!

mylara
01/08/2021

ಬಳ್ಳಾರಿ: ಯಡಿಯೂರಪ್ಪನವರ ನಂತರ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆದರೆ ಇದೀಗ ಸ್ವಾಮೀಜಿಯೋರ್ವರು, ಬಸವರಾಜ್ ಬೊಮ್ಮಾಯಿ ಅವರು ಅಧಿಕಾರ ಪೂರ್ಣಗೊಳಿಸುವುದಿಲ್ಲ ಎಂದು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

ಹೂವಿನಹಡಗಲಿಯ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮಕರ್ತ ವೆಂಕಪ್ಪ ಒಡೆಯರ್ ಅವರ ಭವಿಷ್ಯದ ಪ್ರಕಾರ, ಮುಂದಿನ 6-7 ತಿಂಗಳ ಕಾಲ ಬಸವರಾಜ್ ಬೊಮ್ಮಾಯಿ ಅಧಿಕಾರದಲ್ಲಿರಲಿದ್ದಾರೆ. ಆ ಬಳಿಕ ಗಡ್ಡಧಾರಿಯೊಬ್ಬರು ಮುಖ್ಯಮಂತ್ರಿಯಾಗುತ್ತಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಮೈಲಾರ ಅವರ ಭವಿಷ್ಯದಿಂದಾಗಿ ಇದೀಗ ಗಡ್ಡಧಾರಿಗಳು ಗಡ್ಡನೇವರಿಸಿಕೊಂಡು ನಾನೂ ಮುಖ್ಯಮಂತ್ರಿಯಾಗುತ್ತೇನಾ? ಎಂದು ಯೋಚಿಸುವಂತೆ ಮಾಡಿದೆ. ಇವರ ಭವಿಷ್ಯವಾಣಿ ನಿಜವಾದರೆ, ಈ ಅವಧಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ನಾಲ್ಕು ಜನರು ಮುಖ್ಯಮಂತ್ರಿಗಳಾದಂತಾಗುತ್ತದೆ ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ.ಇದರ ಜೊತೆಗೆ ಗಡ್ಡಧಾರಿ ರಾಜಕಾರಣಿಗಳನ್ನು ಅನುಮಾನದಿಂದ ನೋಡುವಂತಾಗಿದೆ.


Provided by

ಇನ್ನಷ್ಟು ಸುದ್ದಿಗಳು…

“ಕಸವು ಕಸದ ಬುಟ್ಟಿಗೆ ಸೇರಿತು” | ಎನ್.ಮಹೇಶ್ ಬಿಜೆಪಿ ಸೇರ್ಪಡೆ ಹಿನ್ನೆಲೆ ಪರ-ವಿರೋಧ ಚರ್ಚೆ!

ಆಸ್ತಿ ವಿವಾದ ಬಗೆಹರಿಸಲು ಬಂದ ಕೌನ್ಸಿಲರ್, ಎಸ್ ಐಯನ್ನು ಅಟ್ಟಾಡಿಸಿ ಹೊಡೆದ ಮಹಿಳೆ | ವಿಡಿಯೋ ವೈರಲ್

ನೀರಿಗೆ ಇಳಿಯಬೇಡಿ ಅಂದ್ರೂ ಇಳಿದರು… | ಸಮುದ್ರದಲ್ಲಿ ಮುಳುಗಿದ ನಾಲ್ವರ ಪೈಕಿ ಓರ್ವಳು ನೀರುಪಾಲು

ನಟಿ ಶಕೀಲ ಸಾವಿನ ಸುಳ್ಳು ಸುದ್ದಿ ಹರಡಿದ ಯುವಕನಿಗೆ ಅವರು ಹೇಳಿದ್ದೇನು ಗೊತ್ತಾ?

ಉನ್ನಾವೋ ಸಂತ್ರಸ್ತೆಯ ಅಪಘಾತ ಪ್ರಕರಣ: ದೂರುದಾರರ ಆಕ್ಷೇಪಣೆ ರೋಮಾಂಚಕ ಕತೆಯಂತಿವೆ | ದೆಹಲಿ ನ್ಯಾಯಾಲಯ

ಇತ್ತೀಚಿನ ಸುದ್ದಿ