ಸಿಎಂ ರೇಸ್ ನಲ್ಲಿದ್ದ ಬೆಲ್ಲದ್ ಗೆ ಸಚಿವ ಸ್ಥಾನವೂ ಸಿಗಲಿಲ್ಲ | ಶೆಟ್ಟರ್, ಬಿಎಸ್ ವೈಗೆ ಧಿಕ್ಕಾರ ಹೇಳಿದ ಬೆಂಬಲಿಗರು
ಧಾರವಾಡ: ಮುಖ್ಯಮಂತ್ರಿ ಸ್ಥಾನ ಆಕಾಂಕ್ಷಿಯಾಗಿದ್ದ ಅರವಿಂದ್ ಬೆಲ್ಲದ್ ಗೆ ಇದೀಗ ಸಚಿವ ಸ್ಥಾನ ಕೂಡ ತಪ್ಪಿದ್ದು, ಇದರಿಂದಾಗಿ ಬೆಲ್ಲದ್ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಜಗದೀಶ್ ಶೆಟ್ಟರ್ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಲ್ಲದ್ ಗೆ ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಜುಬ್ಲಿ ವೃತ್ತದಲ್ಲಿ ಏಕಾಏಕಿ ರಸ್ತೆ ತಡೆ ಮಾಡಿದ ಕಾರ್ಯಕರ್ತರು, ಬೆಲ್ಲದ್ ಪರ ಘೋಷಣೆ ಕೂಗಿದರು. ಶೆಟ್ಟರ್ ಹಾಗೂ ಯಡಿಯೂರಪ್ಪ ಭಾವ ಚಿತ್ರದ ಮೇಲೆ ಧಿಕ್ಕಾರ ಎಂದು ಬರೆದ ಚಿತ್ರವನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬೆಲ್ಲದ್ ಬೆಂಬಲಿಗರು ಸಿಎಂ ರೇಸ್ ನಲ್ಲಿದ್ದ ಬೆಲ್ಲದ್ ಗೆ ಸಚಿವ ಸ್ಥಾನ ಕೂಡ ನೀಡದಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ಇನ್ನಷ್ಟು ಸುದ್ದಿಗಳು…
ಬ್ರೇಕಿಂಗ್ ನ್ಯೂಸ್: ಬೊಮ್ಮಾಯಿ ಸಂಪುಟ ಅಸ್ತಿತ್ವಕ್ಕೆ | ಯಾರಿಗೆಲ್ಲ ಒಲಿಯಿತು ಸಚಿವ ಸ್ಥಾನ?
ಡಯಾಲಿಸಿಸ್ ಗಾಗಿ ಆಸ್ಪತ್ರೆಗೆ ಬಂದಿದ್ದ ಮಹಿಳೆಯ ಮೇಲೆ ವಾರ್ಡ್ ಬಾಯ್ ನಿಂದ ಅತ್ಯಾಚಾರ!
ಚಟ್ನಿ ರುಚಿಕರವಾಗಿ ತಯಾರಿಸಿಲ್ಲ ಎಂದು ಪತ್ನಿಯನ್ನು ಹೊಡೆದುಕೊಂದ ಪತಿ!
ಪ್ರೀತಿಸಿಲು ನಿರಾಕರಿಸಿದ ಬಾಲಕಿಯನ್ನು ದಾರಿ ಮಧ್ಯೆ ತಡೆದು ಯುವಕನಿಂದ ಘೋರ ಕೃತ್ಯ!