ಹಿಂಸೆಗೆ ಪ್ರಚೋದಿಸುವ ದುರುದ್ದೇಶದಿಂದಲೇ ರೈತರ ಹತ್ಯೆ ನಡೆದಿದೆ | ರವಿಕಿರಣ್ ಪೂನಚ - Mahanayaka
7:15 AM Thursday 19 - September 2024

ಹಿಂಸೆಗೆ ಪ್ರಚೋದಿಸುವ ದುರುದ್ದೇಶದಿಂದಲೇ ರೈತರ ಹತ್ಯೆ ನಡೆದಿದೆ | ರವಿಕಿರಣ್ ಪೂನಚ

farmers protest mangalore
06/10/2021

ಮಂಗಳೂರು: ಉತ್ತರಪ್ರದೇಶ ಲಖಿಂಪುರ್ ಬೇರಿ ಜಿಲ್ಲೆಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿಸಿ 4 ಮಂದಿ ರೈತರ ಹತ್ಯೆ ಮಾಡಿರುವುದನ್ನು ಖಂಡಿಸಿ. ವಿವಿಧ ರೈತ ಕಾರ್ಮಿಕ ದಲಿತ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ರಾಜ್ಯ ರೈತ ಸಂಘದ ರಾಜ್ಯ ನಾಯಕರಾದ ರವಿಕಿರಣ್ ಪೂನಚರವರು, ರೈತ ವಿರೋಧಿಯಾದ ಕೃಷಿ ಕಾಯಿದೆಗಳ ವಿರುದ್ದ ಕಳೆದ 10 ತಿಂಗಳಿನಿಂದ ದೇಶದ ರೈತರು ಸಮರಧೀರ ಹೋರಾಟದಲ್ಲಿ ತೊಡಗಿದ್ದರೂ ಕನಿಷ್ಠ ರೈತರ ಅಹವಾಲನ್ನು ಆಲಿಸಲು ಸಿದ್ದವಿಲ್ಲದ ನರೇಂದ್ರ ಮೋದಿ ಸರಕಾರವು ರೈತ ಹೋರಾಟವನ್ನು ಅಪಹಾಸ್ಯ ಮಾಡುತ್ತಿದ್ದು, ಇಲ್ಲಸಲ್ಲದ ಅಪಪ್ರಚಾರವನ್ನು ಮಾಡುತ್ತಿದೆ. ಮಾತ್ರವಲ್ಲದೆ ಹೋರಾಟದ ಹಾದಿಯನ್ನು ತಪ್ಪಿಸಲು ಹಿಂಸೆಗೆ ಪ್ರಚೋದಿಸುವ ದುರುದ್ದೇಶದಿಂದಲೇ ಕೇಂದ್ರ ಸಚಿವರ ಬೆಂಗಾವಲು ವಾಹನ ರೈತರ ಮೇಲೆಯೇ ಹರಿಸಿ ರೈತರನ್ನು ಹತ್ಯೆ ನಡೆಸಿರುವ ಫ್ಯಾಸಿಸ್ಟ್ ಮೋದಿ ಸರಕಾರ ಹಾಗೂ ಗೂಂಡಾರಾಜ್ಯವಾದ ಯೋಗಿ ಸರಕಾರಗಳ ಅಮಾವೀಯ ಕ್ರತ್ಯವನ್ನು ದೇಶದ ಜನತೆ ಒಂದಾಗಿ ಖಂಡಿಸಲೇಬೇಕಾಗಿದೆ ಎಂದು ಹೇಳಿದರು.

CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಸ್ವಾತಂತ್ರ್ಯ ಚಳುವಳಿಯ ಬಳಿಕ ದೀರ್ಘಕಾಲದ ಐತಿಹಾಸಿಕ ಹೋರಾಟವಾಗಿ ಹೊರಹೊಮ್ಮಿದ ರೈತರ ಹೋರಾಟವು ದೇಶ ಉಳಿಸುವ ದೇಶಪ್ರೇಮಿ ಹೋರಾಟವಾಗಿ ಪರಿವರ್ತನೆ ಗೊಂಡಿದೆ. ಇಂತಹ ರೈತರ ಹೋರಾಟವನ್ನು ವಿರೋಧಿಸುವ, ಅಪಹಾಸ್ಯ ಮಾಡುವ,ವಿನಾಃ ಕಾರಣ ಅಪಪ್ರಚಾರ ಮಾಡುವವರು ನಿಜಕ್ಕೂ ದೇಶದ್ರೋಹಿಗಳು. ಬದಲಾಗಿ ರೈತ ವಿರೋಧಿಯಾದ ಕೃಷಿ ಕಾಯಿದೆಗಳನ್ನು ವಿರೋಧಿಸುವವರು ದೇಶದ್ರೋಹಿಗಳೆಂದು ಜರೆಯುವ ಪ್ರಧಾನಿಗಳ ಹೇಳಿಕೆ ತೀರಾ ಖಂಡನೀಯವಾಗಿದೆ ಎಂದು ಹೇಳಿದರು.


Provided by

ಪ್ರತಿಭಟನೆಯನ್ನು ಉದ್ದೇಶಿಸಿ ರೈತ ಸಂಘಟನೆಗಳ ಮುಖಂಡರಾದ ಕ್ರಷ್ಣಪ್ಪ ಸಾಲ್ಯಾನ್, ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡೀಸ್, ರೆನ್ನಿ ಡಿಸೋಜ, DYFI ನಾಯಕರಾದ ಸಂತೋಷ್ ಬಜಾಲ್ ಮುಂತಾದವರು ಮಾತನಾಡಿ, ರೈತರ ಹತ್ಯೆಗೆ ಕಾರಣವಾದ ಕೇಂದ್ರದ ನರೇಂದ್ರ ಮೋದಿ ಸರಕಾರ ಹಾಗೂ ಉತ್ತರ ಪ್ರದೇಶದ ಯೋಗಿ ಸರಕಾರಗಳ ರೈತ ವಿರೋಧಿ ನಡೆಯನ್ನು ಪ್ರಬಲವಾಗಿ ಖಂಡಿಸಿದರು.

ಈ ಹೋರಾಟದಲ್ಲಿ ವಿವಿಧ ರೈತ ಸಂಘಟನೆಗಳ ಮುಖಂಡರಾದ ರಾಮಣ್ಣ ವಿಟ್ಲ, ವಾಸುದೇವ ಉಚ್ಚಿಲ್,ಶೇಖರ್ ಕುತ್ತಾರ್, ಶಾಹುಲ್ ಹಮೀದ್, ಶಬೀರ್ ಅಹಮ್ಮದ್, ಜಾತ್ಯತೀತ ಜನತಾದಳದ ಜಿಲ್ಲಾ ನಾಯಕರಾದ ಸುಮತಿ ಎಸ್ ಹೆಗ್ಢೆ, ಅಲ್ತಾಪ್ ತುಂಬೆ, CITU ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೊಗರು, DYFI ನಾಯಕರಾದ ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ನಿತಿನ್ ಬಂಗೇರ, ನಿತಿನ್ ಕುತ್ತಾರ್, ಸಾಮಾಜಿಕ ಚಿಂತಕರಾದ ಪ್ರಮೀಳಾ ದೇವಾಡಿಗ ಮುಂತಾದವರು ಭಾಗವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಕಾರ್ಮಿಕರ ಮೇಲೆ ಗುಂಡು ಹಾರಾಟ ಪ್ರಕರಣ ದಿಕ್ಕು ತಪ್ಪದ ರೀತಿಯಲ್ಲಿ ಸಮಗ್ರ ತನಿಖೆ ನಡೆಸಿ | ಡಿವೈಎಫ್ ಐ ಆಗ್ರಹ

ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯವೂ ಇಲ್ಲ | ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ಅಮಾನವೀಯ ಘಟನೆ: ರಾತ್ರೋ ರಾತ್ರಿ ಮನೆಯಲ್ಲಿದ್ದವರನ್ನ ಹೊರದಬ್ಬಿ ಬೀಗ ಜಡಿದ ಬ್ಯಾಂಕ್ ಸಿಬ್ಬಂದಿ!

ಆರೆಸ್ಸೆಸ್ ಬಗ್ಗೆ ಕುಮಾರಸ್ವಾಮಿ ಹೇಳಿಕೆ ಅಜ್ಞಾನ, ಭೀತಿ, ವೈಯಕ್ತಿಕ ಹತಾಶೆಯಾಗಿದೆ | ಬಿ.ವೈ.ವಿಜಯೇಂದ್ರ ಕಿಡಿ

ಮಾಟ ಮಂತ್ರದಿಂದ ನೆಮ್ಮದಿ ಪಡೆಯಲು ಹೋಗಿ 4.41 ಕೋಟಿ ರೂಪಾಯಿ ಕಳೆದುಕೊಂಡ ಮಹಿಳೆ

ಲಖೀಂಪುರ್ ಖೇರ್ ಸಚಿವನ ಪುತ್ರ ರೈತರನ್ನು ಕೆಣಕಿ, ಗುಂಡು ಹಾರಿಸಿದ್ದ | ಎಫ್ ಐಆರ್ ನಲ್ಲಿ ಉಲ್ಲೇಖ

ಶಾಕಿಂಗ್ ನ್ಯೂಸ್: ಒಂದೇ ದಿನದಲ್ಲಿ 40 ಜನರ ಮೇಲೆ ದಾಳಿ ನಡೆಸಿದ ಹುಚ್ಚುನಾಯಿ!

ಟಿಎಂಸಿ ಸೇರ್ಪಡೆಗೂ ಮುನ್ನ ಕೇಶಮುಂಡನ ಮಾಡಿ ಆತ್ಮಶುದ್ಧಿ ಮಾಡಿಕೊಂಡ ಬಿಜೆಪಿ ಶಾಸಕ!

ಇತ್ತೀಚಿನ ಸುದ್ದಿ