ನಮಗೆ ಕಾಂಗ್ರೆಸ್ ನವರ ಪ್ರಮಾಣ ಪತ್ರ ಬೇಕಾಗಿಲ್ಲ | ಸಿಎಂ ಬಸವರಾಜ ಬೊಮ್ಮಾಯಿ - Mahanayaka
12:30 PM Friday 20 - September 2024

ನಮಗೆ ಕಾಂಗ್ರೆಸ್ ನವರ ಪ್ರಮಾಣ ಪತ್ರ ಬೇಕಾಗಿಲ್ಲ | ಸಿಎಂ ಬಸವರಾಜ ಬೊಮ್ಮಾಯಿ

basavaraj bommai
07/12/2021

ಬೆಳಗಾವಿ: ನಮಗೆ ಕಾಂಗ್ರೆಸ್‌ ನವರ ಪ್ರಮಾಣಪತ್ರ ಬೇಕಿಲ್ಲ. ಹತಾಶೆಯಿಂದ ಆ ಪಕ್ಷದವರು ಆಡುತ್ತಿರುವ ಮಾತುಗಳಿಗೆ ಕಿವಿಕೊಡಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನ ರಿಜೆಂಟ ರೆಸಾರ್ಟ್ಸ್‌ ನಲ್ಲಿ ಸೋಮವಾರ ಆಯೋಜಿಸಿದ್ದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ ಅವರು, ಎಲ್ಲ ವರ್ಗದವರೂ ನಮ್ಮ ಪಕ್ಷಕ್ಕೆ ಬೆಂಬಲ ಕೊಡುತ್ತಿದ್ದಾರೆ. ಮತದಾರರಾದ ಸ್ಥಳೀಯ ಸಂಸ್ಥೆಗಳ‌ ಚುನಾಯಿತ ಪ್ರತಿನಿಧಿಗಳ ಮನವೊಲಿಕೆಯನ್ನು ಅವರೊಂದಿಗೆ ‌ಸಂಪರ್ಕದಲ್ಲಿರುವ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮಾಡಬೇಕು ಎಂದರು.

ಇದು ಚುನಾವಣೆ ವರ್ಷ‌. ರಾಜಕೀಯ ಚಟುವಟಿಕೆಗಳು ತೀವ್ರವಾಗಿ ನಡೆಯುತ್ತವೆ. ಕಾಂಗ್ರೆಸ್‌ ನವರು ಹತಾಶರಾಗಿದ್ದಾರೆ. ಜವಾಬ್ದಾರಿ ಅರಿಯದೆ ಮನಸೋ ಇಚ್ಛೆ ಮಾತನಾಡುತ್ತಿದ್ದಾರೆ. ಆ ಪಕ್ಷದವರಿಗೆ ಜನರಿಂದ ಯಾವುದೇ ಪ್ರಮಾಣಪತ್ರ ಬೇಕಿಲ್ಲ. ಆದರೆ ನಮಗೆ ಬೇಕಾಗುತ್ತದೆ. ಜನರು ಬಹಳ ವಿಶ್ವಾಸವನ್ನು ನಮ್ಮ ಮೇಲೆ ಇಟ್ಟಿದ್ದಾರೆ ಎಂದು ಹೇಳಿದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಿಜೆಪಿಗೆ ಯಾರ ಜೊತೆಗೂ ಮೈತ್ರಿಯ ಅಗತ್ಯವಿಲ್ಲ: ವಿ.ಶ್ರೀನಿವಾಸ್ ಪ್ರಸಾದ್

ಪ್ರಾಯೋಗಿಕ ಪರೀಕ್ಷೆಯ ನೆಪ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ | ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನ

ಸತ್ಯದಪ್ಪೆ ಬೊಲ್ಲೆಯ ಬಯಕೆ/ ಸೀಮಂತ ಕಾರ್ಯಕ್ರಮ: ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 09

ಮದ್ಯಪ್ರಿಯರಿಗೆ ಶಾಕ್: ನಾಳೆಯಿಂದ 3 ದಿನಗಳ ಕಾಲ ಬಾರ್ ಬಂದ್!

ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ತಾಯಿ ಮಗ ಆತ್ಮಹತ್ಯೆ

‘ಬಿಜೆಪಿಯ ಭೀಷ್ಮ ‘ ಉರಿಮಜಲು ಕೆ.ರಾಮ ಭಟ್ ಇನ್ನಿಲ್ಲ

ಇತ್ತೀಚಿನ ಸುದ್ದಿ