ಬಿಜೆಪಿ ಸಂಸದರ ಮೇಲೆ ಕಲ್ಲು ತೂರಾಟ - Mahanayaka
10:05 AM Friday 20 - September 2024

ಬಿಜೆಪಿ ಸಂಸದರ ಮೇಲೆ ಕಲ್ಲು ತೂರಾಟ

arjun singh
23/01/2022

ಕೋಲ್ಕತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾರಕ್‌ಪುರ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಬಿಜೆಪಿ ಮತ್ತು ಟಿಎಂಸಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿರುವ ಘಟನೆ ಭಾನುವಾರ ನಡೆದಿದೆ.

ಇಂದು ಬೆಳಗ್ಗೆ ಕಂಕಿನಾರದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಕಾರ್ಯಕ್ರಮಕ್ಕೆ ಆಗಮಿಸಿದ್ದ ನನ್ನ ಮೇಲೆ ಟಿಎಂಸಿ ಗೂಂಡಾಗಳು ದಾಳಿ ನಡೆಸಿದರು. ಟಿಎಂಸಿಯು, ಬಂಗಾಳದ ಬಿಜೆಪಿ ನಾಯಕರನ್ನು ಕೊಳಕು ತಂತ್ರಗಳಿಂದ ಪ್ರತ್ಯೇಕಿಸಲು ಬಯಸುತ್ತದೆ, ಇದರಿಂದ ಜನರು ತಮ್ಮ ‘ಗುಂಡಾಗಿರಿ’ಗೆ ಹೆದರುತ್ತಾರೆ ಎಂದು ಭಾವಿಸಿದ್ದೀರಾ? ನನ್ನನ್ನು ತಡೆಯಲು ಸಾಧ್ಯವೇ ಇಲ್ಲ ಎಂದು ಅರ್ಜುನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿ ಸಂಸದರನ್ನು ರಕ್ಷಿಸಿ ಸುರಕ್ಷಿತವಾಗಿ ಅವರ ನಿವಾಸಕ್ಕೆ ಕಳುಹಿಸಲಾಗಿದೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳ ಜತೆಗೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಂದು ಜಂಟಿ ಪೊಲೀಸ್ ಆಯುಕ್ತ ಧ್ರುಬಾ ಜ್ಯೋತಿ ಡೇ ತಿಳಿಸಿದ್ದಾರೆ.


Provided by

ಶನಿವಾರ ರಾತ್ರಿ, ಸಮೀಪದ ಪಾನಿಹಟಿ ಪ್ರದೇಶದ ಬಿಟಿ ರಸ್ತೆಯಲ್ಲಿರುವ ಟಿಎಂಸಿ ಪಕ್ಷದ ಕಚೇರಿಯ ಮೇಲೆ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿತ್ತು, ಇದು ಎರಡು ಕಡೆಯ ನಡುವೆ ಘರ್ಷಣೆಗೆ ಕಾರಣವಾಯಿತು. ಎರಡೂ ಘಟನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳನ್ನು ಇನ್ನಷ್ಟೇ ಬಂಧಿಸಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಬರ್ಬರ ಹತ್ಯೆಗೈದ ಪತಿ

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ; ಆರೋಪಿಯ ಬಂಧನ

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

ಸಿದ್ದರಾಮಯ್ಯ ಸ್ವಯಂ ಘೋಷಿತ ಸಂವಿಧಾನ ಪಂಡಿತ: ಹೆಚ್​​.ಡಿ ಕುಮಾರಸ್ವಾಮಿ

ಪ್ಲಾಸ್ಟಿಕ್‌ ಅಂಗಡಿಗಳು ಬೆಂಕಿಗೆ ಆಹುತಿ: ಇಬ್ಬರು ಸಜೀವ ದಹನ

ಇತ್ತೀಚಿನ ಸುದ್ದಿ