ಊಟ ಬಡಿಸುವುದು ತಡವಾಗಿದೆ ಎಂದು ಮದುವೆ ನಿರಾಕರಿಸಿ ವರ ಮಂಟಪದಿಂದ ಎಸ್ಕೇಪ್ - Mahanayaka
8:13 AM Friday 20 - September 2024

ಊಟ ಬಡಿಸುವುದು ತಡವಾಗಿದೆ ಎಂದು ಮದುವೆ ನಿರಾಕರಿಸಿ ವರ ಮಂಟಪದಿಂದ ಎಸ್ಕೇಪ್

marriage
21/02/2022

ಪಾಟ್ನಾ: ಊಟ ಬಡಿಸುವುದು ತಡವಾಗಿದೆ ಎಂದು ವರನೊಬ್ಬ ಮದುವೆ ನಿರಾಕರಿಸಿ ಮಂಟಪದಿಂದ ಎದ್ದು ಹೋಗಿರುವ ಘಟನೆ ಪುರ್ನಿಯಾದ ಮೊಹಾನಿ ಪಂಚಾಯತ್‍ನ ಬಟೌನಾ ಗ್ರಾಮದ ಈಸ್ವರಿ ಟೋಲಾದಲ್ಲಿ ನಡೆದಿದೆ.

ವಿವಾಹ ವಿಧಿ ವಿಧಾನಗಳು ನಡೆಯುತ್ತಿದ್ದರಿಂದ ವರನ ಕುಟುಂಬದ ಸದಸ್ಯರಿಗೆ ಊಟ ಬಡಿಸಲು ತಡವಾಗಿದೆ. ಇದು ವರನ ತಂದೆಯನ್ನು ತುಂಬಾ ಕೆರಳಿಸಿತು, ಅವರು ಮದುವೆ ಸಮಾರಂಭದಲ್ಲಿ ನಾನು ಇರುವುದಿಲ್ಲ, ಮನೆಗೆ ಹೋಗುತ್ತೇನೆ ಎಂದು ಹೇಳುತ್ತ ಸಿಟ್ಟಾಗಿದ್ದಾರೆ. ಈ ವೇಳೆ ಸ್ಥಳೀಯರು ಹಾಗೂ ಪಂಚಾಯಿತಿಯವರು ಮಧ್ಯ ಪ್ರವೇಶಿಸಿ ಎರಡು ಕಡೆಯವರ ನಡುವೆ ಸಮಸ್ಯೆ ಬಗೆಹರಿಸಲು ಯತ್ನಿಸಿದರು. ಆದರೆ ಅಷ್ಟೊತ್ತಿಗಾಗಲೇ ವರನು ಮಂಟಪದಿಂದ ಎದ್ದು ಹೋಗಿದ್ದನು. ಹೀಗಾಗಿ ಮದುವೆಯನ್ನು ನಿಲ್ಲಿಸಬೇಕಾಯಿತು.

ವರನ ತಂದೆ ವಧುವಿನ ಕುಟುಂಬಕ್ಕೆ ಮದುವೆಗೆ ಅಡುಗೆ ಮಾಡಲು ತಗಲುವ ವೆಚ್ಚ, ಬೈಕ್ ಮತ್ತು ವರನಿಗೆ ಪಡೆದ ಇತರ ಎಲ್ಲಾ ಉಡುಗೊರೆಗಳನ್ನು ವಾಪಸ್ ನೀಡಿದ್ದಾರೆ. ವಧುವಿನ ತಾಯಿ ಇದೀಗ ವರ ಮತ್ತು ಆತನ ತಂದೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೃತ ಹರ್ಷನ ವಿರುದ್ದ ನಾಲ್ಕು ಪ್ರಕರಣ ದಾಖಲಾಗಿದ್ದವು

ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು

ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

ಹರ್ಷ ಶವಯಾತ್ರೆಯ ವೇಳೆ ಅಹಿತಕರ ಘಟನೆ: ವಾಹನಗಳಿಗೆ ಬೆಂಕಿ

ಇತ್ತೀಚಿನ ಸುದ್ದಿ