ಹೆರಿಗೆ ವೇಳೆ ತಾಯಿ – ಮಗು ಸಾವು
ಮಂಗಳೂರು: ನಗರದ ವಕೀಲೆಯೊಬ್ಬರು ಪ್ರಥಮ ಹೆರಿಗೆ ಸಂದರ್ಭ ಮಗು ಸಹಿತ ಮೃತಪಟ್ಟ ಘಟನೆ ಗುರುವಾರ ನಸುಕಿನ ಜಾವ ನಡೆದಿದೆ.
ಮಾಣಿ ಸಮೀಪದ ಕಡೆಶಿವಾಲಯ ಬುಡೋಳಿ ನಿವಾಸಿಯಾಗಿದ್ದ ಗಾಯತ್ರಿ (38) ಅವರು ಪುತ್ತೂರಿನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. ಸುಮಾರು 8 ವರ್ಷ ವಕೀಲ ವೃತ್ತಿ ಮಾಡಿದ್ದ ಅವರು 2010ರಲ್ಲಿ ಪೆರ್ಲದ ಆನಡ್ಕ ಕಾಡಮನೆ ಸುಧಾಕರ್ ಅವರೊಂದಿಗೆ ವಿವಾಹವಾಗಿತ್ತು. ಪುತ್ತೂರು ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಪಡೆದಿದ್ದ ಗಾಯತ್ರಿ ಪುತ್ತೂರಿನ ವಕೀಲ ಸಂಘದ ಸದಸ್ಯತ್ವ ಹೊಂದಿದ್ದರು.
ಫೆ. 23ರಂದು ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ನಗರದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಗುರುವಾರ ಬೆಳಗ್ಗಿನ ಜಾವ ಹೆರಿಗೆಯ ಸಂದರ್ಭ ಮಗು ಸಹಿತ ಅವರು ಮೃತಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚೆರ್ನೋಬಿಲ್ ನ ಪರಮಾಣು ವಿದ್ಯುತ್ ಸ್ಥಾವರ ವಶಕ್ಕೆ ಪಡೆದ ರಷ್ಯಾ ಪಡೆಗಳು
ಹಸುಗಳ ಮೇಲೆ ಲೈಂಗಿಕ ದೌರ್ಜನ್ಯ: ವ್ಯಕ್ತಿಯ ಬಂಧನ
ಲಂಚಕ್ಕೆ ಬೇಡಿಕೆ: ಆಯುಷ್ ಅಧಿಕಾರಿ ಎಸಿಬಿ ಬಲೆಗೆ
ನಾವು ಅವರ ಹತ್ತು ಜನರನ್ನು ಹೊಡೆಯುತ್ತೇವೆ: ರಿಷಿಕುಮಾರ್ ಸ್ವಾಮೀಜಿಯಿಂದ ಮತ್ತೆ ವಿವಾದಾತ್ಮಕ ಹೇಳಿಕೆ