ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ: ಮಗ - ತಂದೆ ಇಬ್ಬರೂ ಸಾವಿಗೆ ಶರಣು - Mahanayaka

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ: ಮಗ – ತಂದೆ ಇಬ್ಬರೂ ಸಾವಿಗೆ ಶರಣು

verajpette
09/03/2022

ವಿರಾಜಪೇಟೆ: ಕ್ಷುಲ್ಲಕ ಕಾರಣಕ್ಕೆ ತಂದೆ ಹಾಗೂ ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಇಲ್ಲಿನ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ನಡೆದಿದೆ.


Provided by

ತಂದೆ ಸುಬ್ಬಯ್ಯ (75) ಹಾಗೂ ಪುತ್ರ ಗಿರೀಶ್ ಗಣಪತಿ (36) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಪುತ್ರ ನಿಂದಿಸಿದ ಎಂಬ ಕಾರಣಕ್ಕೆ ಕೆರೆಗೆ ಹಾರಿ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ತಂದೆ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಬಳಿಕ ಪುತ್ರನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಂಗಳವಾರ ತಂದೆ ಮಗನ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಇದರಿಂದ ಮನನೊಂದು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಸಂಬಂಧ ವಿರಾಜಪೇಟೆ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದುಬೈನಲ್ಲಿ ಕೇರಳದ ಖ್ಯಾತ ಆಲ್ಬಂ ಸ್ಟಾರ್ ಅನುಮಾನಸ್ಪದವಾಗಿ ಸಾವು

ದಳಪತಿ ವಿಜಯ್ ಜೊತೆಗೆ ನಟಿಸಲಿದ್ದಾರಾ ರಶ್ಮಿಕಾ ಮಂದಣ್ಣ?

ಮಹಿಳಾ ದಿನಾಚರಣೆಯಂದೇ ಹೀನ ಕೃತ್ಯ: ವಿದೇಶಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ | ಕೇಂದ್ರ ಇಂಧನ ಸಚಿವರು ಜನರಿಗೆ ನೀಡಿದ ಸ್ಪಷ್ಟನೆ ಏನು?

ಡ್ರ್ಯಾಗನ್ ಫ್ರೂಟ್ ಸೇವನೆಯಿಂದಾಗುವ ಲಾಭಗಳೇನು?

 

ಇತ್ತೀಚಿನ ಸುದ್ದಿ