ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ - Mahanayaka
9:42 PM Thursday 19 - September 2024

ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

court judgement
24/03/2022

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪವು ಮಂಗಳೂರಿನ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಪೋಕ್ಸೋ ಕಾಯ್ದೆಯ ಕಲಂ 6ರನ್ವಯ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ.

ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಬೊಳ್ಳರ ಮಜಲು ಮನೆಯ ಪ್ರಸಾದ್‌ (31) ಶಿಕ್ಷೆಗೊಳಗಾದ ಅಪರಾಧಿ. ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್‌ ಡಿ. ಮತ್ತು ನಾಗೇಶ್‌ ಕೆ. ಅವರು ತನಿಖೆಯನ್ನು ಪೂರ್ಣಗೊಳಿಸಿ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ.ಕೆ. ರಾಧಾಕೃಷ್ಣ ಅವರು ಆರೋಪ ಸಾಬೀತಾಗಿದೆ ಎನ್ನುವ ತೀರ್ಮಾನಕ್ಕೆ ಬಂದು ಮಾ. 22ರಂದು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.


Provided by

ಪೋಕ್ಸೋ ಕಾಯ್ದೆಯ ಕಲಂ 6ರನ್ವಯ ಆರೋಪಿಗೆ 10 ವರ್ಷ ಕಠಿನ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ಹಾಗೂ ದಂಡ ತೆರಲು ತಪ್ಪಿದರೆ ಮತ್ತೆ 2 ತಿಂಗಳ ಸಜೆ, ಐಪಿಸಿ ಸೆ. 506 (ಕೊಲೆ ಬೆದರಿಕೆ) ಅನ್ವಯ 1 ವರ್ಷ ಸಜೆ, ಐಪಿಸಿ ಸೆಕ್ಷನ್‌ 323 (ಹಲ್ಲೆ) ಅನ್ವಯ 6 ತಿಂಗಳ ಸಜೆಯನ್ನು ವಿಧಿಸಲಾಗಿದೆ. ಈ ಮೂರೂ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಬೇಕಾಗಿದೆ.

ಸಂತ್ರಸ್ತ ಬಾಲಕಿಗೆ ಸರಕಾರದ ವತಿಯಿಂದ 4 ಲಕ್ಷ ರೂ. ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ದೊರಕಿಸಿ ಕೊಡುವಂತೆ ನ್ಯಾಯಾಧೀಶರು ನಿರ್ದೇಶನ ನೀಡಿದ್ದಾರೆ. ಈ ಪ್ರಕರಣದಲ್ಲಿ ಸರಕಾರದ ಪರ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಸಿ. ವೆಂಕಟರಮಣ ಸ್ವಾಮಿ ಅವರು ವಾದಿಸಿದ್ದರು.

ಪ್ರಕರಣದ ವಿವರ: ಸೆಂಟ್ರಿಂಗ್‌ ಕೆಲಸ ಮಾಡುತ್ತಿದ್ದ ಪ್ರಸಾದ್‌ ಮನೆಗೆ ಆತನ ಸಂಬಂಧಿಕಳೇ ಆಗಿದ್ದ 17 ವರ್ಷದ ಬಾಲಕಿ ಮನೆ ಕೆಲಸಕ್ಕಾಗಿ ಆಗಿಂದಾಗ್ಗೆ ಬರುತ್ತಿದ್ದು, 2018 ಜು. 28ರಂದು ಆಕೆ ಮನೆಗೆ ಬಂದಾಗ ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ. ಆ ಬಳಿಕ ಪದೇ ಪದೆ ಆತ ಅತ್ಯಾಚಾರ ಮಾಡಿದ್ದ.

ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಒಮ್ಮೆ ಆಕೆ ಪ್ರತಿಭಟಿಸಿದಾಗ ಆತ ಆಕೆಯ ಮೇಲೆ ಹಲ್ಲೆ ನಡೆಸಿದ್ದ. ಇದರಿಂದ ಬಾಲಕಿಯ ತಾಯಿ ಮತ್ತು ಅಣ್ಣನಿಗೆ ವಿಷಯ ಗೊತ್ತಾಗಿತ್ತು. ಬಳಿಕ ಮನೆಮಂದಿಯ ಸಲಹೆಯಂತೆ ಬಾಲಕಿ 2019ರ ಜೂ. 13ರಂದು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಿದ್ದಳು. ಪೊಲೀಸರು ಆರೋಪಿ ಪ್ರಸಾದ್‌ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಆರೋಪಿಯನ್ನು ಬಂಧಿಸಲು ತೆರಳಿದ್ದ ಎಸ್‍ಐಗೆ ಚೂರಿ ಇರಿತ

ಕೊಲ್ಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರುವಂತೆ ಹಿಂದೂ ಸಂಘಟನೆಗಳಿಂದ ಮನವಿ

ಕೊಂಡ ಹಾಯುವಾಗ ಕೆಂಡಕ್ಕೆ ಜಾರಿ ಬಿದ್ದು ಪೂಜಾರಿ ಗಂಭೀರ

ಸಿಡಿದ ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್ ಫಾರ್ಮರ್: ತಂದೆ ಸಾವು, ಮಗಳ ಸ್ಥಿತಿ ಚಿಂತಾಜನಕ

ಇತ್ತೀಚಿನ ಸುದ್ದಿ