ಯಡಿಯೂರಪ್ಪರನ್ನು ರಾಜಾಹುಲಿ ಎಂದು ಕರೆದರೆ ಅವರು ಹುಲಿ ಆಗ್ತಾರಾ?: ಸಿದ್ದರಾಮಯ್ಯ ಪ್ರಶ್ನೆ - Mahanayaka

ಯಡಿಯೂರಪ್ಪರನ್ನು ರಾಜಾಹುಲಿ ಎಂದು ಕರೆದರೆ ಅವರು ಹುಲಿ ಆಗ್ತಾರಾ?: ಸಿದ್ದರಾಮಯ್ಯ ಪ್ರಶ್ನೆ

siddaramaiha
05/01/2023

ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೆದುರು ಮಾತನಾಡುವ ಧೈರ್ಯ ಇಲ್ಲ, ಬೇರೆಯವರ ಧಮ್, ತಾಕತ್ ಪ್ರಶ್ನಿಸುವ ಬೊಮ್ಮಾಯಿಯೇ ಸ್ವತಃ ಮೋದಿಯವರನ್ನು ಕಂಡ್ರೆ ಹೆದರುತ್ತಾರೆ ಎಂಬರ್ಥದಲ್ಲಿ ಮಾತನಾಡಿದ್ದೆ. ಅದನ್ನು ಅನವಶ್ಯಕವಾಗಿ ವಿವಾದ ಮಾಡಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.


Provided by

ಪುಕ್ಕಲು ಸ್ವಭಾವದವರು, ಧೈರ್ಯ ಇಲ್ಲದವರು ಎನ್ನುವ ಅರ್ಥದಲ್ಲಿ ಹಳ್ಳಿ ಭಾಷೆಯಲ್ಲಿ ನಾಯಿ ಮರಿ ಎಂದಿದ್ದೇ ಹೊರತು ಮುಖ್ಯಮಂತ್ರಿಗಳನ್ನು ವ್ಯಕ್ತಿಗತವಾಗಿ ನಿಂದಿಸುವ ದುರುದ್ದೇಶ ಖಂಡಿತ ಇರಲಿಲ್ಲ. ಪ್ರಾಣಿ-ಪಕ್ಷಿ-ಹೂ-ಹಣ್ಣುಗಳನ್ನು ಅವುಗಳ ಸ್ವಭಾವಗಳ ಸಾಮ್ಯತೆಗೆ ಅನುಗುಣವಾಗಿ ಮನುಷ್ಯರಿಗೆ ಹೋಲಿಸುವುದು ಜನಪದ ಸಂಸ್ಕೃತಿ. ಯಾವ ಪ್ರಾಣಿ-ಪಕ್ಷಿಯೂ ಕೀಳೂ ಅಲ್ಲ, ಮೇಲು ಅಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಹುಲಿ ಮನುಷ್ಯರನ್ನು ಕೊಂದು ತಿನ್ನುವ ಪ್ರಾಣಿ. ಬಿಜೆಪಿಯವರೇ ಯಡಿಯೂರಪ್ಪನವರನ್ನು ರಾಜಾ ಹುಲಿ ಎಂದು ಬಣ್ಣಿಸುತ್ತಾರೆ. ಅದನ್ನೂ ಅವಮಾನ ಎಂದು ತಿಳಿದುಕೊಳ್ಳಬಹುದಲ್ಲಾ? ಟಿವಿ ಚಾನೆಲ್‌ನವರು ಪ್ರತಿದಿನ ನನ್ನನ್ನು ‘ಟಗರು’ ‘ಟಗರು’ ಎಂದು ಹಾಡು ಕಟ್ಟಿ ತೋರಿಸುತ್ತಾರೆ. ಟಗರು ಗುಮ್ಮುತ್ತೆ, ನಾನು ಯಾರಿಗೆ ಗುಮ್ಮಿದ್ದೇನೆ? ನಾನೂ ಅವಮಾನ ಮಾಡಿದ್ದಾರೆ ಎಂದು ಕೋಪಮಾಡಿಕೊಳ್ಳಬಹುದಲ್ಲಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


Provided by

ಸಾವಿರಾರು ಮಂದಿ ಹತ್ಯೆಗೀಡಾದ ಗುಜರಾತ್ ಗಲಭೆ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ ‘ “ಕಾರಿಗೆ ಅಡ್ಡಬಂದು ನಾಯಿಮರಿ ಸತ್ತರೆ ಏನು ಮಾಡೋಣ” ಎಂದು ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರಮೋದಿ ಹೇಳಿದ್ದರು. ಇದೂ ವಿವಾದವಾಗಿತ್ತಲ್ಲವೇ? 6/10 ನಾಯಿ ಸ್ವಾಮಿ ನಿಷ್ಠೆಗೆ ಹೆಸರಾದರೆ, ನಾಯಿ‌ಮರಿ ಪುಕ್ಕಲು ಸ್ವಭಾವಕ್ಕೆ ಕುಖ್ಯಾತಿ‌ಪಡೆದಿದೆ.  ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಪ್ರಧಾನಿ ಎದುರು ತುಟಿ ಬಿಚ್ಚಲಾಗದ ಮುಖ್ಯಮಂತ್ರಿಯನ್ನು ಹುಲಿ-ಸಿಂಹಕ್ಕೆ ಹೋಲಿಸಲಾಗುತ್ತಾ? ನಾಯಿ ಮರಿ, ಬೆಕ್ಕಿನ ಮರಿಗಳಿಗೆ ಹೋಲಿಸಬೇಕಲ್ಲಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಮಗೆ ನಾಡಿನ ಹಿತ ಮುಖ್ಯ. 15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶಿಫಾರಸು ಮಾಡಿದ್ದ 5,495 ಕೋಟಿ ವಿಶೇಷ ಅನುದಾನವನ್ನು ನೀಡಲು ನಿರ್ಮಲಾ ಸೀತಾರಾಮನ್ ಅವರು ನಿರಾಕರಿಸಿದರು, ಅವರೊಂದಿಗೆ ಮಾತನಾಡಿ ಈ ಅನುದಾನ ತರಲು ಬೊಮ್ಮಾಯಿ ಅವರಿಂದ ಸಾಧ್ಯವಾಗಿಲ್ಲ. ಇದರಿಂದ ನಷ್ಟವಾಗಿದ್ದು ರಾಜ್ಯಕ್ಕಲ್ಲವೇ? ರಾಜ್ಯಕ್ಕೆ ಸಿಗಬೇಕಾದ ಅನುದಾನ ಸರಿಯಾದ ಪ್ರಮಾಣದಲ್ಲಿ ಸಿಕ್ಕಿಲ್ಲ, ಪೂರ್ಣಪ್ರಮಾಣದ ಜಿಎಸ್‌ಟಿ ಪರಿಹಾರ ಬಂದಿಲ್ಲ, ಬರ, ನೆರೆ ಪರಿಹಾರದ ಹಣ ಬಂದಿಲ್ಲ. ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿರೋರು ಇದನ್ನೆಲ್ಲ ಗಟ್ಟಿ ಧ್ವನಿಯಲ್ಲಿ ಕೇಳದೆ ಹೆದರಿ ಸುಮ್ಮನಿದ್ರೆ ನಾಡಿಗೆ ಅನ್ಯಾಯವಾಗಲ್ವ? ಎಂದು ಅವರು ಪ್ರಶ್ನಿಸಿದರು.

ಬಸವರಾಜ ಬೊಮ್ಮಾಯಿ ಅವರು ನಮ್ಮ ಒಡನಾಟದವರು, ಅವರೇನು ಬೇಸರ ಮಾಡಿಕೊಂಡಿರಲಾರರು. ಸುತ್ತಲಿನ ವಂದಿ-ಮಾಗದರು ಅವರನ್ನು ಓಲೈಸಲಿಕ್ಕಾಗಿ ಖಂಡಿಸಿ, ಮಂಡಿಸಿ ವಿವಾದ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬೊಮ್ಮಾಯಿಯವರು ಜಾಗರೂಕರಾಗಿರುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ