ವಿಚಿತ್ರ ಘಟನೆ: ಸತ್ತು ಮತ್ತೆ ಬದುಕಿ ಮತ್ತೆ ಮೃತಪಟ್ಟ ನೌಕರ! - Mahanayaka

ವಿಚಿತ್ರ ಘಟನೆ: ಸತ್ತು ಮತ್ತೆ ಬದುಕಿ ಮತ್ತೆ ಮೃತಪಟ್ಟ ನೌಕರ!

chamaraja nagara
19/04/2023

ಚಾಮರಾಜನಗರ: ಚುನಾವಣಾ ತರಬೇತಿ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾನೆಂದಿದ್ದ ನೌಕರನಿಗೆ ಜೀವ ಬಂದು ಬಳಿಕ ಮತ್ತೆ ಮೃತಪಟ್ಟಿರುವ ವಿಚಿತ್ರ ಘಟನೆ ಚಾಮರಾಜನಗರ ಹನೂರು ಪಟ್ಟಣದಲ್ಲಿ ನಡೆದಿದೆ.

ಖನಿಜ ಇಲಾಖೆಯ ನೌಕರ ಜಗದೀಶ್ ಜೀವಂತವಿದ್ದ ನೌಕರ. ಇಂದು ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಎಆರ್ ಓ ಹಾಗೂ ಪಿಆರ್ ಒಗಳಿಗೆ ಚುನಾವಣಾ ತರಬೇತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆ ನೋವಿನಿಂದ ಕುಸಿದು ಬಿದ್ದಿದ್ದರಿಂದ ಕೂಡಲೇ ಅವರನ್ನು ಹತ್ತಿರದ ಕಾಮಗೆರೆ ಹೋಲಿ ಗ್ರಾಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.

ಈ ವೇಳೆ ಅಲ್ಲಿನ ವೈದ್ಯಾಧಿಕಾರಿಗಳು ಜಗದೀಶ್ ಅವರನ್ನು ತಪಾಸಣೆಗೆ ಒಳಪಡಿಸಿ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದರು. ಜಿಲ್ಲಾಧಿಕಾರಿ ಡಿಎಸ್ ರಮೇಶ್ ಸ್ಥಳಕ್ಕೆ ಭೇಟಿ ನೀಡಿ ವೈದ್ಯಾಧಿಕಾರಿಗಳಿಂದ ಮಾಹಿತಿ ಸಹ ಪಡೆದಿದ್ದರು. ನೌಕರರು ಜಗದೀಶ್ ಗೆ ಶ್ರದ್ಧಾಂಜಲಿ ಸಲ್ಲಿಸಿ ಸೂಕ್ತ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದರು.


Provided by

ಹನೂರು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಜಗದೀಶ್ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯುಲಾಗಿತ್ತು. ಎರಡು ಮೂರು ತಾಸು ಕಳೆದ ಬಳಿಕ ಅಚಾನಕ್ಕಾಗಿ ತಾಯಿ ಜಗದೀಶ್ ಶವ ಗಮನಿಸಿದ್ದು ಕೈ ಕಾಲು ಆಡುತ್ತಿದ್ದನ್ನು ಕಂಡು ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣ ಅಲ್ಲೇ ಇದ್ದವರು ಹೆಚ್ಚಿನ ಚಿಕಿತ್ಸೆಗಾಗಿ ತುರ್ತು ವಾಹನದ ಮೂಲಕ ಮೈಸೂರಿಗೆ ರವಾನಿಸಿದ್ದಾರೆ. ಆದರೆ, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

 

ಇತ್ತೀಚಿನ ಸುದ್ದಿ