ಮಣಿಪುರ ಹಿಂಸಾಚಾರದ ಹಿಂದೆ ಇದ್ಯಂತೆ ಚೀನಾ ಕೈವಾಡ: ಶಿವಸೇನೆಯ ಸಂಸದ ಬಿಚ್ಚಿಟ್ಟ ಸ್ಫೋಟಕ ಹೇಳಿಕೆಯಲ್ಲೇನಿದೆ..?
ಶಿವಸೇನೆ (ಯುಬಿಟಿ) ಸಂಸದ ಸಂಜಯ್ ರೌತ್ ಅವರು ಮಣಿಪುರದಲ್ಲಿ ಹಿಂಸಾಚಾರವನ್ನು ಉತ್ತೇಜಿಸುವಲ್ಲಿ ಚೀನಾ ಭಾಗಿಯಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಅಲ್ಲದೇ
ಚೀನಾದ ವಿರುದ್ಧ ತೆಗೆದುಕೊಂಡ ಕ್ರಮದ ಬಗ್ಗೆ ಕೇಂದ್ರ ಸರ್ಕಾರದಿಂದ ಅವರು ಉತ್ತರಗಳನ್ನು ಕೋರಿದ್ದಾರೆ.
ಮೇ 3 ರಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾದ ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರವನ್ನು ಯಾರು ಮುಂಚಿತವಾಗಿ ಯೋಜಿಸಿದರು ಎಂದು ಪ್ರಶ್ನಿಸಿದ್ದಾರೆ. ಮಣಿಪುರ ಹಿಂಸಾಚಾರದಲ್ಲಿ ಚೀನಾ ಭಾಗಿಯಾಗಿದೆ. ನೀವು ಯಾವ ಕ್ರಮ ಕೈಗೊಂಡಿದ್ದೀರಿ..? ಕಳೆದ 40 ದಿನಗಳಿಂದ ಹಿಂಸಾಚಾರ ನಡೆಯುತ್ತಿದೆ. ಜನರು ತಮ್ಮ ಮನೆಗಳನ್ನು ತೊರೆದು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಕಿಡಿಕಾರಿದ ಸಂಜಯ್ ರೌತ್ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
50 ದಿನಗಳಿಂದ ರಾಜ್ಯವನ್ನು ಆವರಿಸಿರುವ ಹಿಂಸಾಚಾರದಲ್ಲಿ ವಿದೇಶಿ ಕೈವಾಡವಿದೆ ಎಂದು ಬಿರೇನ್ ಸಿಂಗ್ ಸುಳಿವು ನೀಡಿದ ಕೆಲವೇ ಗಂಟೆಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.
‘ಬಿರೇನ್ ಸಿಂಗ್ ರಾಜೀನಾಮೆ ನೀಡಬೇಕು. ಅಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಬೇಕು’ ಎಂದು ರಾವತ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ರಾಜೀನಾಮೆ ನೀಡುವ ಸನಿಹದಲ್ಲಿದ್ದರು ಎಂಬುದನ್ನು ಗಮನಿಸಬೇಕು. ಜೂನ್ 30 ರಂದು ಇಂಫಾಲ್ ನಲ್ಲಿ ಸಾವಿರಾರು ಪ್ರತಿಭಟನಾಕಾರರು ಬಿರೇನ್ ಸಿಂಗ್ ಅವರ ಬೆಂಗಾವಲು ಪಡೆಯನ್ನು ರಾಜಭವನದ ಕಡೆಗೆ ಹೋಗದಂತೆ ತಡೆದ ನಂತರ ಹೈ ವೋಲ್ಟೇಜ್ ನಾಟಕ ನಡೆಯಿತು.
ಸ್ಥಳೀಯರು ಅವರ ರಾಜೀನಾಮೆ ಪತ್ರವನ್ನು ಪ್ರತಿಭಟನಾ ಪ್ರದರ್ಶನದಲ್ಲಿ ಹರಿದು ಹಾಕಿದಾಗ ಬಿರೇನ್ ಸಿಂಗ್ ರ ನಿರ್ಧಾರ ಬದಲಾಯಿತು ಎಂದರು.
ಈ ನಿರ್ಣಾಯಕ ಹಂತದಲ್ಲಿ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಬಿರೇನ್ ಸಿಂಗ್ ನಂತರ ಟ್ವೀಟ್ ಮಾಡಿದ್ದರು. ಮಣಿಪುರದಲ್ಲಿ ಮೇ 3 ರಂದು ಘರ್ಷಣೆಗಳು ಪ್ರಾರಂಭವಾದಾಗಿನಿಂದ ಮೈಟಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw