ಕೋರ್ಟ್ ಆವರಣದಲ್ಲಿಯೇ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ - Mahanayaka
6:22 AM Friday 20 - September 2024

ಕೋರ್ಟ್ ಆವರಣದಲ್ಲಿಯೇ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ

04/02/2021

ಬೆಂಗಳೂರು: ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಾಹಿತಿ ಭಗವಾನ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಇದರಿಂದ ಆಕ್ರೋಶಿತರಾದ ವಕೀಲೆಯೊಬ್ಬರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ಘಟನೆ ನಡೆದಿದೆ.

ನ್ಯಾಯಾಲಯದ ಆವರಣದಲ್ಲಿಯೇ ಈ ಘಟನೆ ನಡೆದಿದೆ.  ವಕೀಲೆ ಮೀರಾ ರಾಘವೇಂದ್ರ ಅವರು ಆಕ್ರೋಶಿತರಾಗಿ ಭಗವಾನ್ ಅವರಿಗೆ ಮಸಿ ಬಳಿದಿದ್ದಾರೆ. ಈ ಸಂಬಂಧ  ಭಗವಾನ್ ಅವರು ಮೀರಾ ವಿರುದ್ಧ ದೂರು ದಾಖಲಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ವಕೀಲೆ ಮೀರಾ ರಾಘವೇಂದ್ರ  ಖಾಸಗಿ ದೂರು ದಾಖಲಿಸಿದ್ದರು. ಈ ದೂರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆ ನಡೆಸಿ, ಭಗವಾನ್ ಅವರಿಗೆ ಜಾಮೀನು ನೀಡಿದೆ. ಇದಾದ ಬಳಿಕ ಭಗವಾನ್ ಕೋರ್ಟ್ ನಿಂದ ಹೊರ ಬರುತ್ತಿದ್ದಂತೆಯೇ ಅವರ ಮುಖಕ್ಕೆ ಮೀರಾ ಮಸಿ ಬಳಿಸಿದ್ದಾರೆ.


Provided by

ಇತ್ತೀಚಿನ ಸುದ್ದಿ