ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿಯುವವರಿಗೆ 1 ಲಕ್ಷ ರೂ. | ಪ್ರತಿಭಾ ಕುಳಾಯಿ - Mahanayaka
7:29 AM Thursday 19 - September 2024

ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿಯುವವರಿಗೆ 1 ಲಕ್ಷ ರೂ. | ಪ್ರತಿಭಾ ಕುಳಾಯಿ

08/02/2021

ಮಂಗಳೂರು:  ಬಿಲ್ಲವರ ಮೂಲ ಪುರುಷರಾದ ಕೋಟಿ ಚೆನ್ನಯರ ವಿರುದ್ಧ ಹಾಗೂ ಜನಾರ್ದನ ಪೂಜಾರಿ ವಿರುದ್ಧ  ಕೀಳಾಗಿ ಮಾತನಾಡಿರುವ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಗದೀಶ್ ಅಧಿಕಾರಿ ವಿರುದ್ಧ ಕಾಂಗ್ರೆಸ್ ನ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಗದೀಶ್ ಅವರು ಗರೋಡಿಗೆ ತೆರಳಿ ಜನಾರ್ಧನ ಪೂಜಾರಿಯವರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕೆಂದು ಪ್ರತಿಭಾ ಒತ್ತಾಯಿಸಿದ್ದಾರೆ. ಅಲ್ಲದೇ ಜಗದೀಶ್ ಅಧಿಕಾರಿಯ ಮುಖಕ್ಕೆ ಮಸಿ ಬಳಿಯುವವರಿಗೆ ತಾನು 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಅವರು ಹೇಳಿದ್ದಾರೆ.

ಜನಗದೀಶ್ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿಡಿಯೋವನ್ನು ಪ್ರತಿಭಾ ಕುಲಾಯಿ ಫೇಸ್ ಬುಕ್ ನಲ್ಲಿ ಹಾಕಿದ್ದು ವಿಡಿಯೋ ವ್ಯಾಪಕ ವೈರಲ್ ಆಗಿದೆ.


Provided by

ಇತ್ತೀಚಿನ ಸುದ್ದಿ