ತಮಿಳು ನಟ ಸಿದ್ದಾರ್ಥ್ ಗೆ ಅವಮಾನ ವಿಚಾರ: ಕ್ಷಮೆ ಕೇಳಿದ ನಟ ಶಿವರಾಜ್ ಕುಮಾರ್
29/09/2023
ಬೆಂಗಳೂರು: ತಮಿಳು ನಟ ಸಿದ್ದಾರ್ಥ್ ನಟನೆಯ ‘ಚಿಕ್ಕು’ ಸುದ್ದಿಗೋಷ್ಠಿಗೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಿರೋದ್ದಕ್ಕೆ ಸ್ಯಾಂಡಲ್ ವುಡ್ ನ ಪರವಾಗಿ ಹಿರಿಯ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕ್ಷಮೆ ಕೇಳಿದ್ದಾರೆ.
ನಿನ್ನೆ ನಟ ಸಿದ್ಧಾರ್ಥ್ ‘ಚಿಕ್ಕು’ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಆಗಮಿಸಿದ್ದಾಗ ಚಿತ್ರದ ಪ್ರಚಾರ ಮಾಡದಂತೆ ಕೆಲ ಕನ್ನಡಪರ ಹೋರಾಟಗಾರರು ತಡೆದಿದ್ದರು. ಈ ವಿಚಾರದ ಕುರಿತು ಮಾತನಾಡಿದ ಶಿವಣ್ಣ, ನಾವು ಏನೇ ಮಾಡಿದರೂ ಬೇರೆಯವರಿಗೆ ಹರ್ಟ್ ಆಗಬಾರದು. ಆಗಿರುವ ಘಟನೆ ತಪ್ಪು. ಹೀಗೆಲ್ಲ ಮಾಡಬಾರದು. ಇನ್ಮುಂದೆ ಈ ರೀತಿ ಆಗುವುದಿಲ್ಲ ಎಂದಿದ್ದಾರೆ.