ಕ್ರೈಸ್ತ, ಇಸ್ಲಾಮ್ ಗೆ ಮತಾಂತರವಾಗುವ ದಲಿತರಿಗೆ ಮೀಸಲಾತಿ ಇಲ್ಲ | ರವಿಶಂಕರ್ ಪ್ರಸಾದ್ - Mahanayaka
11:09 AM Friday 20 - September 2024

ಕ್ರೈಸ್ತ, ಇಸ್ಲಾಮ್ ಗೆ ಮತಾಂತರವಾಗುವ ದಲಿತರಿಗೆ ಮೀಸಲಾತಿ ಇಲ್ಲ | ರವಿಶಂಕರ್ ಪ್ರಸಾದ್

12/02/2021

ನವದೆಹಲಿ: ಕ್ರೈಸ್ತ, ಇಸ್ಲಾಮ್ ಗಳಿಗೆ ಮತಾಂತರವಾಗುವ ದಲಿತರು ಮೀಸಲು ಕ್ಷೇತ್ರಗಳಲ್ಲಿ ವಿಧಾನಸಭೆ, ಲೋಕಸಭೆ ಚುನಾವಣೆಗಳಿಗೆ ಸ್ಪರ್ಧಿಸುವಂತಿಲ್ಲ ಹಾಗೂ ಅಂತಹ ದಲಿತರಿಗೆ ಮೀಸಲಾತಿಯಡಿಯಲ್ಲಿ ಇರುವ ಯಾವ ಸೌಲಭ್ಯವೂ ಸಿಗುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಅವರ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿದ ಅವರು,  ಹಿಂದೂ, ಸಿಖ್, ಬೌದ್ಧ ಮತಗಳನ್ನು ಅನುಸರಿಸುವ ದಲಿತರನ್ನು ಹೊರತುಪಡಿಸಿ, ಕ್ರೈಸ್ತ, ಮುಸಲ್ಮಾನರಾಗಿ ಮತಾಂತರ ಹೊಂದುವ ದಲಿತರಿಗೆ ಮೀಸಲಾತಿಯ ಯಾವ ಸೌಲಭ್ಯವೂ ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂವಿಧಾನದ ಪ್ಯಾರಾ 3ರನ್ನು (ಪರಿಶಿಷ್ಟ ಜಾತಿಗಳು) ಉಲ್ಲೇಖಿಸಿರುವ ಸಚಿವರು, ದಲಿತರು ಹಿಂದೂ, ಸಿಖ್, ಬೌದ್ಧ ಧರ್ಮಗಳನ್ನು ಅನುಸರಿಸಿದರೆ ಅವರನ್ನು ಪರಿಶಿಷ್ಟ ಜಾತಿಯ ಸದಸ್ಯರೆಂದೇ ಗುರುತಿಸಲಾಗುತ್ತದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ. ಈ ಕಾನೂನನ್ನು ಬದಲಾವಣೆ ಮಾಡುವ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ, ಯಥಾಸ್ಥಿತಿ ಮುಂದುವರೆಯಲಿದೆ ಎಂದು ಸಚಿವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.


Provided by

ಇತ್ತೀಚಿನ ಸುದ್ದಿ