ಪ್ರಧಾನಿಯವರೇ, ನೀವು ಮಾತ್ರವಲ್ಲ, ನಿಮ್ಮ ಅಜ್ಜ ಕೂಡ ಡಿಎಂಕೆಯನ್ನು ಮುಟ್ಟಲು ಸಾಧ್ಯವಿಲ್ಲ: ಉದಯನಿಧಿ ಸ್ಟಾಲಿನ್ ಸವಾಲು
ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯವು ತೆರಿಗೆಯಾಗಿ ಪಾವತಿಸುವ ಪ್ರತಿ ರೂಪಾಯಿಗೆ ಕೇಂದ್ರವು ರಾಜ್ಯಕ್ಕೆ ಕೇವಲ 28 ಪೈಸೆ ಪಾವತಿಸಿದೆ ಎಂದು ಆರೋಪಿಸಿದ್ದಾರೆ.
ಉದಯನಿಧಿ ಅವರು ಪ್ರಧಾನಿ ಮತ್ತು ಅವರ ಸರ್ಕಾರವನ್ನು ಗುರಿಯಾಗಿಸಿ ’28 ಪೈಸೆ ಮೋದಿ’ ಎಂದು ವ್ಯಂಗ್ಯವಾಡಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಕೆಂಡವಾಗಿದೆ.
ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್, ರಾಜ್ಯದಲ್ಲಿ ತಮ್ಮ ಪಕ್ಷವಾದ ಡಿಎಂಕೆಯನ್ನು ಮುಟ್ಟೋಕೇ ಬಿಜೆಪಿಗೆ ಸಾಧ್ಯವಿಲ್ಲ ಎಂದು ಸವಾಲೆಸೆದಿದ್ದಾರೆ.
ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮುಂದಿನ 40 ದಿನಗಳ ಕಾಲ ತಮಿಳುನಾಡಿನಲ್ಲಿ ಕ್ಯಾಂಪ್ ಮಾಡಲು ಪ್ರಧಾನಿ ಮೋದಿಗೆ ಸವಾಲು ಹಾಕಿದ ಅವರು, ಅದರ ನಂತರವೂ ಬಿಜೆಪಿಗೆ ರಾಜ್ಯದಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ.
“ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸುತ್ತಾಡುತ್ತಿದ್ದಾರೆ. ಅವನು ಬಾಯಿ ತೆರೆದಾಗಲೆಲ್ಲಾ ಸುಳ್ಳು ಹೇಳುತ್ತಾನೆ. ಅವರು (ಬಿಜೆಪಿ) ಡಿಎಂಕೆಯನ್ನು ನಾಶಪಡಿಸುತ್ತಾರೆ ಎಂದು ಅವರು ಹೇಳುತ್ತಾರೆ. ಕಳೆದ 60-70 ವರ್ಷಗಳಿಂದ ಇದನ್ನು ಹೇಳುತ್ತಿರುವವರು ಈಗಷ್ಟೇ ನಾಶವಾಗಿದ್ದಾರೆ. ಪ್ರಿಯ ಪ್ರಧಾನಿಯವರೇ, ನೀವು ಮಾತ್ರವಲ್ಲ, ನಿಮ್ಮ ಅಜ್ಜ ಕೂಡ ಡಿಎಂಕೆಯನ್ನು ಏನನ್ನೂ ಮಾಡಲು ಸಾಧ್ಯವಿಲ್ಲ. ನಿಮಗೆ ಡಿಎಂಕೆಯನ್ನು ಮುಟ್ಟಲು ಸಹ ಸಾಧ್ಯವಿಲ್ಲ” ಎಂದು ಉದಯನಿಧಿ ಸ್ಟಾಲಿನ್ ಸವಾಲೆಸೆದಿದ್ದಾರೆ.
ರಾಜ್ಯವು ಪ್ರವಾಹ ಅಥವಾ ಚಂಡಮಾರುತದಿಂದ ಬಾಧಿತವಾದಾಗ ಪ್ರಧಾನಿ ಮೋದಿ ತಮಿಳುನಾಡಿಗೆ ಭೇಟಿ ನೀಡುವುದಿಲ್ಲ. ಆದರೆ ಚುನಾವಣೆಯ ಸಮಯದಲ್ಲಿ ಮಾತ್ರ ಬರುತ್ತಾರೆ ಎಂದು ಅವರು ಕಿಡಿಕಾರಿದ್ದಾರೆ.
ಪ್ರಧಾನಿ ವಿರುದ್ಧ ಹೇಳಿಕೆ ನೀಡಿರುವ ಸ್ಟಾಲಿನ್ ವಿರುದ್ಧ ಬಿಜೆಪಿಯು ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth