ಮತ ಎಣಿಕೆ ವೇಳೆ ಎದೆ ನೋವಿನಿಂದ ಅಸ್ವಸ್ಥಗೊಂಡ ಅಧಿಕಾರಿ!
04/06/2024
ವಿಜಯಪುರ: ಲೋಕಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಇದೇ ವೇಳೆ ವಿಜಯಪುರದ ಆದಿಲ್ ಶಾಹಿ ಸದನದಲ್ಲಿ ಕೌಂಟಿಂಗ್ ಸುಪರ್ ವೈಸರ್ ಆಗಿ ನೇಮಕಗೊಂಡಿದ್ದ ಅಧಿಕಾರಿ ಎದೆ ನೋವಿನಿಂದ ಅಸ್ವಸ್ಥರಾದ ಘಟನೆ ನಡೆದಿದೆ.
ಸಿದ್ದರಾಜ ದೊಡ್ಡಮನಿ ಅಸ್ವಸ್ಥರಾದ ಅಧಿಕಾರಿಯಾಗಿದ್ದಾರೆ. ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿತ್ತು. ಸದ್ಯ ಅವರನ್ನು ಪ್ರಾಥಮಿಕ ಚಿಕಿತ್ಸೆಗೆ ಕರೆದೊಯ್ಯಲಾಗಿದೆ.
ಸೈನಿಕ ಶಾಲೆಯ ಆವರಣದಲ್ಲೇ ಪ್ರಾಥಮಿಕ ಚಿಕಿತ್ಸೆ ಕೇಂದ್ರವನ್ನು ಸ್ಥಾಪಿಸಲಾಗಿದೆ. ಆಸ್ಪತ್ರೆಗೆ ರವಾನಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: