ಚುನಾವಣಾ ಫಲಿತಾಂಶ ನೋಡಿ ಹೃದಯಾಘಾತದಿಂದ ವ್ಯಕ್ತಿ ಸಾವು!
ಹುಬ್ಬಳ್ಳಿ : ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ನಿರೀಕ್ಷೆಗಿಂತ ಕಡಿಮೆ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಚುನಾವಣಾ ಫಲಿತಾಂಶ ನೋಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಶಿವಪ್ರಕಾಶ್ ಹಿರೇಮಠ ಮೃತಪಟ್ಟವರಾಗಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಘಟನೆ ನಡೆದಿದ್ದು, ಮನೆಯ ಸೋಫಾದಲ್ಲಿ ಕುಳಿತು ಚುನಾವಣಾ ಫಲಿತಾಂಶ ನೋಡುತ್ತಿದ್ದ ಅವರು ಕುಸಿದು ಬಿದ್ದಿದ್ದರು.
ಎನ್ ಡಿಎ 300ರ ಗಡಿ ದಾಟಿಲ್ಲ ಎನ್ನುವ ಸುದ್ದಿ ತಿಳಿದು ಅವರು ಆಘಾತಕ್ಕೊಳಗಾಗಿದ್ದರು ಎನ್ನಲಾಗಿದೆ. ಅವರು ಕುಸಿದು ಬಿದ್ದಾಗ ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068