ನಟ ದರ್ಶನ್ ಅವರನ್ನು ಭೇಟಿಯಾದ ಸಹೋದರ ದಿನಕರ್ ತೂಗುದೀಪ!
15/07/2024
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಸಹೋದರ ದಿನಕರ್ ತೂಗುದೀಪ ಭೇಟಿಯಾಗಿದ್ದಾರೆ.
ದರ್ಶನ್ ವಿಜಯಲಕ್ಷ್ಮೀ ಅವರೊಂದಿಗೆ ಆಗಮಿಸಿದ ದಿನಕರ್ ತಮ್ಮ ಸಹೋದರ ದರ್ಶನ್ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ.
ದರ್ಶನ್ ಅವರ ಪರವಾಗಿ ಪತ್ನಿ ವಿಜಯಲಕ್ಷ್ಮೀ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಈ ಪ್ರಕರಣ ಸಂಬಂಧ ಚರ್ಚಿಸಲು ಹಾಗೂ ದರ್ಶನ್ ಅವರನ್ನು ನೋಡಲು ವಿಜಯಲಕ್ಷ್ಮೀ, ದಿನಕರ್ ಹಾಗೂ ದರ್ಶನ್ ಅವರ ಅಕ್ಕನ ಮಗ ಚಂದನ್ ಜೈಲಿಗೆ ಭೇಟಿ ನೀಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: