ಶೆಡ್ ಗೆ ಬೆಂಕಿ ಹಚ್ಚಿದ ಪಾಪಿಗಳು: ತಾಯಿ ಮಗಳ ದಾರುಣ ಸಾವು | ಮೂವರ ಸ್ಥಿತಿ ಗಂಭೀರ
ಬಾಗಲಕೋಟೆ: ಕಿಡಿಗೇಡಿಗಳು ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಪೆಟ್ರೋಲ್ ತುಂಬಿಸಿ ಶೆಡ್ ಮೇಲೆ ಸುರಿದು ಬೆಂಕಿ ಹಚ್ಚಿ ಘಟನೆ ನಡೆದಿದ್ದು, ಪರಿಣಾಮವಾಗಿ ಶೆಡ್ ನಲ್ಲಿದ್ದ ತಾಯಿ ಮಗಳು ಸಜೀವ ಸಹನಗೊಂಡು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಜೈಬಾನ್ (55), ಶಬಾನ್ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೆಂಕಿ ಹಚ್ಚಿದ ಪರಿಣಾಮ ತಾಯಿ–ಮಗಳು ಸಜೀವ ದಹನವಾಗಿದ್ದುವ, ಶೆಡ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ದಸ್ತಗೀರಸಾಬ್, ಸುಬಾನ್ ಹಾಗೂ ಸಿದ್ದಿಕಿ ಎಂಬವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿದ್ದು, ಶ್ವಾನ ದಳ ಮೂಲಕ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬಾಗಲಕೋಟೆ ಎಸ್.ಪಿ. ಅಮರನಾಥ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೃತ್ಯಕ್ಕೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: