ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನಕ್ಕೆ ಕಲ್ಲುತೂರಾಟ ನಡೆಸಿದ ರಮೇಶ್ ಬೆಂಬಲಿಗರು

ಬೆಳಗಾವಿ: ಇಂದು ಬೆಳಗಾವಿ ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರ ವಾಹನಗಳ ಮೇಲೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಶಿವಕುಮಾರ್ ಆಗಮನದ ಸುದ್ದಿ ತಿಳಿದು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ರಮೇಶ್ ಬೆಂಬಲಿಗರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.
ವಿಮಾನ ನಿಲ್ದಾಣದಿಂದ ಡಿ.ಕೆ.ಶಿವಕುಮಾರ್ ಬೆಂಬಲಿಗರ ಜೊತೆಗೆ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ವಾಹನ ತಡೆಯಲು ರಮೇಶ್ ಬೆಂಬಲಿಗರು ಯತ್ನಿಸಿದ್ದು, ಈ ವೇಳೆ ಪೊಲೀಸರು ತಡೆದಾಗ ಡಿ.ಕೆ.ಶಿವಕುಮಾರ್ ಬೆಂಬಲಿಗರ ವಾಹನಕ್ಕೆ ಚಪ್ಪಲಿ, ಕಲ್ಲುತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಚ್ ನಡೆಸಿದ್ದಾರೆ. ತಮ್ಮ ಕಾನೂನು ಬಾಹಿರ ಕೃತ್ಯವನ್ನು ತಡೆದಿರುವುದಕ್ಕೆ ರಮೇಶ್ ಜಾರಕಿಹೊಳಿ ಬೆಂಬಲಿಗರು ಪೊಲೀಸರ ವಿರುದ್ಧವೇ ಗರಂ ಆಗಿದ್ದಾರೆ.
ರಾಜ್ಯದ ಕಾನೂನು ಸುವ್ಯವಸ್ಥೆ ಕಾಲು ಮುರಿದು ಮೂಲೆಯಲ್ಲಿ ಕುಳಿತಿರುವುದು ದಿನೇ ದಿನೇ ಸ್ಪಷ್ಟವಾಗುತ್ತಿದೆ
ವಿರೋಧ ಪಕ್ಷದ ಅಧ್ಯಕ್ಷರೊಬ್ಬರ ಎದುರು ಚಂಬಲ್ ಕಣಿವೆಯ ಡಕಾಯಿತರಂತೆ ವರ್ತಿಸುತ್ತಿದೆ ರಮೇಶ್ ಜಾರಕಿಹೊಳಿಯ ಗೂಂಡಾಪಡೆ@BSBommai ಅವರೇ ನೀವು ಅತ್ಯಾಚಾರಿಯ ಈ ನಾಟಕ ನೋಡಿ ಮಜಾ ಅನುಭವಿಸುತ್ತಾ ಕುಳಿತಿದ್ದೀರಾ?#ArrestRapistRamesh
— Karnataka Congress (@INCKarnataka) March 28, 2021
ಬಿಜೆಪಿ ಶಾಸಕನಿಗೆ ಹಿಗ್ಗಾಮುಗ್ಗಾ ಥಳಿಸಿದ ರೈತರು | ಕಾರಣ ಏನು ಗೊತ್ತಾ?