ಕಲ್ಯಾಣಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು - Mahanayaka

ಕಲ್ಯಾಣಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Bannerghatta
10/02/2025

ಬೆಂಗಳೂರು: ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು ತೆರಳಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ.


Provided by

ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು(20), ಯೋಗಿಶ್ವರನ್(20) ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಹೆಬ್ಬಗೋಡಿಯ ಕಾಲೇಜೊಂದರ 5 ಮಂದಿ ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು ಬಂದಿದ್ದ ವೇಳೆ ಈ ಘಟನೆ ನಡೆದಿದೆ.

ನೀರಿಗೆ ಇಳಿದಿದ್ದ ವಿದ್ಯಾರ್ಥಿಗಳ ಪೈಕಿ ದೀಪು ಹಾಗೂ ಯೋಗೀಶ್ವರನ್ ಈಜಲು ಸಾಧ್ಯವಾಗದೇ ಪರದಾಡಿದ್ದಾರೆ. ಕೆಲ ಕಾಲ ಜೀವ ಉಳಿಸಿಕೊಳ್ಳಲು ಸಾಕಷ್ಟು ಹೋರಾಟ ನಡೆಸಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದಾರೆ.


Provided by

ನೀರಲ್ಲಿ ಮುಳುಗುತ್ತಿದ್ದ ಸ್ನೇಹಿತರನ್ನು ರಕ್ಷಿಸಲಾಗದೇ ಉಳಿದ ಸ್ನೇಹಿತರು ಪರದಾಡಿದ್ದಾರೆ. ಈ ಘಟನೆಯ ದೃಶ್ಯ ಸ್ಥಳೀಯ ಯುವಕರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

 

ಇತ್ತೀಚಿನ ಸುದ್ದಿ