ದಿಲ್ಲಿ ಸೋಲಿನ ನಂತರ ಮಹತ್ವದ ತೀರ್ಮಾನ: ಪಂಜಾಬ್ ಕ್ಯಾಬಿನೆಟ್ ನಲ್ಲಿ ಬದಲಾವಣೆ, ಪೊಲೀಸರ ವರ್ಗಾವಣೆ

ಫೆಬ್ರವರಿ 5 ರಂದು ನಡೆದ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಅವಮಾನಕರ ಸೋಲನ್ನು ಅನುಭವಿಸಿದ ನಂತರ ನಿಯಂತ್ರಣವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಪಂಜಾಬ್ ನ ಆಮ್ ಆದ್ಮಿ ಪಕ್ಷ (ಎಎಪಿ) ನೇತೃತ್ವದ ಸರ್ಕಾರವು ಕೇವಲ 24 ಗಂಟೆಗಳ ಅವಧಿಯಲ್ಲಿ ಪ್ರಮುಖ ಆಡಳಿತಾತ್ಮಕ ಬದಲಾವಣೆಗಳನ್ನು ಜಾರಿಗೆ ತಂದಿದೆ.
ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸಲಹೆಯ ಮೇರೆಗೆ ಸರ್ಕಾರ ಶುಕ್ರವಾರ ಸಂಜೆ ಆಡಳಿತ ಸುಧಾರಣಾ ಇಲಾಖೆಯನ್ನು ರದ್ದುಗೊಳಿಸಿದೆ.
ಗೆಜೆಟ್ ಅಧಿಸೂಚನೆಯ ಪ್ರಕಾರ, ಇಲಾಖೆಯ ಉಸ್ತುವಾರಿ ಕುಲದೀಪ್ ಸಿಂಗ್ ಧಲಿವಾಲ್ ಅವರು ಎನ್ಆರ್ ಐ ವ್ಯವಹಾರಗಳ ಖಾತೆಯನ್ನು ಮಾತ್ರ ಹೊಂದಿರುತ್ತಾರೆ.
ಪಂಜಾಬ್ ನಲ್ಲಿ ಕೊನೆಯ ಕ್ಯಾಬಿನೆಟ್ ಪುನರ್ ರಚನೆ ಸೆಪ್ಟೆಂಬರ್ 2024 ರಲ್ಲಿ ನಡೆದಿತ್ತು. ಮನ್ ನೇತೃತ್ವದಲ್ಲಿ ಐದು ಹೊಸ ಮಂತ್ರಿಗಳನ್ನು ಸೇರಿಸಿಕೊಂಡು, ನಾಲ್ವರನ್ನು ಕೈಬಿಡಲಾಗಿತ್ತು. ರಾಜ್ಯ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ಸೇರಿದಂತೆ ಒಟ್ಟು 16 ಸಚಿವರು ಇದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj