ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡುತ್ತಿದ್ದ ವೇಳೆ ಡಿಕ್ಕಿ ಹೊಡೆದ ಇನ್ನೊಂದು ಕಾರು: ಕಾನ್ಸ್’ಟೇಬಲ್ ದುರಂತ ಸಾವು - Mahanayaka
5:42 AM Saturday 21 - September 2024

ಕೆಟ್ಟು ನಿಂತಿದ್ದ ಕಾರು ಪರಿಶೀಲನೆ ಮಾಡುತ್ತಿದ್ದ ವೇಳೆ ಡಿಕ್ಕಿ ಹೊಡೆದ ಇನ್ನೊಂದು ಕಾರು: ಕಾನ್ಸ್’ಟೇಬಲ್ ದುರಂತ ಸಾವು

bangalore
03/07/2023

ಬೆಂಗಳೂರು: ಕೆಟ್ಟು ನಿಂತಿದ್ದ ಕಾರನ್ನು ಪರಿಶೀಲನೆ ಮಾಡಲು ಹೋಗಿದ್ದ ವೇಳೆ ಇನ್ನೊಂದು ಕಾರು ಡಿಕ್ಕಿಯಾಗಿ  ಕಾನ್ಸ್ ಟೇಬಲ್ ವೊಬ್ಬರು ದುರಂತ ಅಂತ್ಯಕಂಡ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಚಿಕ್ಕಜಾಲ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.

ಕಾನ್ಸ್ ಟೇಬಲ್ ಸುರೇಶ್ ಸಾವಿಗೀಡಾದವರಾಗಿದ್ದಾರೆ. ಜುಲೈ 2ರಂದು ರಾತ್ರಿ ನೈಟ್ ರೌಂಡ್ಸ್ ​ನಲ್ಲಿದ್ದ ದೇವನಹಳ್ಳಿ ಇನ್ಸ್​ಪೆಕ್ಟರ್​ ಧರ್ಮೆಗೌಡ ಮತ್ತು ಜೀಪ್ ಡ್ರೈವ್ ಮಾಡುತ್ತಿದ್ದ ಕಾನ್ಸ್​ಟೇಬಲ್ ಸುರೇಶ್, ಹೆದ್ದಾರಿ ಬದಿಯಲ್ಲಿ  ಕೆಟ್ಟು ನಿಂತಿದ್ದ ಇನ್ನೋವಾ ಕಾರನ್ನು ಪರಿಶೀಲನೆ ಮಾಡಲು ತೆರಳಿದ್ದಾರೆ. ಇದೇ ವೇಳೆ ವೇಗವಾಗಿ ಬಂದ ಅಸೆಂಟ್  ಕಾರು ಕಾನ್ಸ್​ಟೇಬಲ್ ಸುರೇಶ್ ಹಾಗೂ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಪಕ್ಕದಲ್ಲೇ ಇದ್ದ ಇನ್ಸ್​ಪೆಕ್ಟರ್​ ಧರ್ಮೆಗೌಡ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಡಿಕ್ಕಿ ಹೊಡೆದ ಅಸೆಂಟ್ ಕಾರಿನಲ್ಲಿ ಮೂವರು ಯುವಕರು ಹಾಗೂ ಮೂವರು ಯುವತಿಯರಿದ್ದು,  ರಾತ್ರಿ ಪಾರ್ಟಿಯ ಬಳಿಕ ಬೆಳಗ್ಗೆ ನಂದಿ ಬೆಟ್ಟಕ್ಕೆ ತೆರಳುತ್ತಿದ್ದರೆನ್ನಲಾಗಿದೆ. ಈ ಕಾರಿನಲ್ಲಿದ್ದವರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿವೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ