“ಆ ಹುಡುಗಿಯ ಜೊತೆ ಯಾಕೆ ಮಾತನಾಡುತ್ತೀಯಾ?” ಎಂದು ಕೇಳಿ ಹಲ್ಲೆ ನಡೆಸಿದರು: ಹಲ್ಲೆಗೊಳಗಾದ ವಿದ್ಯಾರ್ಥಿ ದೂರು

ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಲಭ್ಯವಾಗಿದ್ದು, ವಿದ್ಯಾರ್ಥಿನಿ ಹಾಗೂ ಅದೇ ಕಾಲೇಜಿನ ವಿದ್ಯಾರ್ಥಿ ಮಾತನಾಡುತ್ತಿದ್ದಾರೆಂಬ ಕಾರಣಕ್ಕೆ ತಂಡ ವಿದ್ಯಾರ್ಥಿಗೆ ಹಲ್ಲೆ ನಡೆಸಿದೆ ಎಂದು ತಿಳಿದು ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಕೊಡಿಯಾಲಬೈಲು ಕಾಲೇಜಿನ ಪ್ರಥಮ ವರ್ಷದ ಬಿಕಾಂ ವಿದ್ಯಾರ್ಥಿ ಮಹಮ್ಮದ್ ಸನೀಫ್ ಎಂದು ತಿಳಿದುಬಂದಿದೆ.
ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನನ್ನ ಸ್ನೇಹಿತೆಯಾಗಿದ್ದು, ಆಕೆಯೊಂದಿಗೆ ಮಾತನಾಡುವುದು ಕೆಲವರಿಗೆ ಇಷ್ಟವಿಲ್ಲದ ಕಾರಣ ನಾನು ಕ್ಲಾಸ್ ರೂಂನಲ್ಲಿರುವಾಗ ನಮ್ಮ ಕಾಲೇಜಿನಲ್ಲಿ ಓದುತ್ತಿದ್ದ ಅಂತಿಮ ವರ್ಷದ ಬಿಬಿಎ ವಿದ್ಯಾರ್ಥಿಗಳಾದ ದೀಕ್ಷಿತ್ ಮತ್ತು ಧನುಷ್ ಎಂಬವರು ಕ್ಲಾಸ್ ರೂಮ್ ನಿಂದ ನನ್ನನ್ನು ಕರೆದು ಮಾತನಾಡಲು ಇದೆ ಎಂದು ಹೇಳಿ ಕಾಲೇಜಿನ ಗ್ರೌಂಡ್ ಗೆ ಕರೆದುಕೊಂಡು ಹೋಗಿ ಅಲ್ಲೇ ಇದ್ದ ನಮ್ಮ ಕಾಲೇಜಿನ ಇತರ ವಿದ್ಯಾರ್ಥಿಗಳಾದ ಪ್ರಜ್ವಲ್, ತನುಜ್ , ಅಕ್ಷಯ್, ಮೋಕ್ಷಿತ್ ಹಾಗೂ ಸುಳ್ಯದ ಎನ್ ಎಂಸಿ ಕಾಲೇಜಿನ ಗೌತಮ್ ಮತ್ತು ಇತರರು ಕಾಲರ್ ಪಟ್ಟಿ ಹಿಡಿದುನೀನು ಆ ಹುಡುಗಿ ಜತೆಗೆ ಯಾಕೆ ಮಾತನಾಡುತ್ತಿಯಾ ಎಂದು ಹೇಳುತ್ತಾ, ಅವರ ಕೈಯಲ್ಲಿದ್ದ ದೊಣ್ಣೆಯಿಂದ ನನ್ನ ಬೆನ್ನಿಗೆ ಹೊಡೆದು ನೆಲಕ್ಕೆ ದೂಡಿಹಾಕಿ ಕಾಲಿನಿಂದ ತುಳಿದು ಇನ್ನೂ ಮುಂದಕ್ಕೆ ಮಾತನಾಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ನಂತರ ಮನೆಯವರಿಗೆ ವಿಷಯ ತಿಳಿಸಿ, ಗಂಭೀರ ಗಾಯಗೊಂಡ ಪರಿಣಾಮ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದೇನೆ. ಹಾಗೂ ನನ್ನ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿರುವುದಾಗಿ ಮಹಮ್ಮದ್ ಸನೀಫ್ ತಿಳಿಸಿದ್ದಾರೆ.
ಸನೀಫ್ ನೀಡಿದ ದೂರಿನಂತೆ ಪೊಲೀಸರು ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್ ಹಾಗೂ ಇತರರ ವಿರುದ್ಧ 143,147,148, 323, 324, 506, ಜೊತೆಗೆ 149 ಐಪಿಸಿ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇವರಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಎನ್.ಎಂ.ಸಿ. ವಿದ್ಯಾರ್ಥಿಯಾಗಿದ್ದು ಉಳಿದವರು ಸುಳ್ಯ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka