ಸುಪ್ರೀಂ ಕೆಂಗಣ್ಣು: ಕ್ಷಮೆಯಾಚಿಸಿದ ಯೋಗ ಗುರು ಬಾಬಾ ರಾಮದೇವ್
ಜನರ ದಾರಿ ತಪ್ಪಿಸುವ ಜಾಹೀರಾತು ಪ್ರಕಟಿಸಿರುವುದಕ್ಕಾಗಿ ಸುಪ್ರೀಂ ಕೋರ್ಟ್ ನ ಕೆಂಗಣ್ಣಿಗೆ ಗುರಿಯಾಗಿದ್ದ ಪತಂಜಲಿ ಆಯುರ್ವೇದ ಸಂಸ್ಥೆಯ ಸಂಸ್ಥಾಪಕರಾಗಿರುವ ಯೋಗ ಗುರು ಬಾಬಾ ರಾಮದೇವ್ ಅವರು ನಿಶ್ಯರ್ಥ ಕ್ಷಮೆ ಯಾಚಿಸಿದ್ದಾರೆ. ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿ ಅವರು ಈ ಕ್ಷಮೆ ಯಾಚಿಸಿದ್ದಾರೆ.
ರಾಮ್ ದೇವ್ ಹಾಗೂ ಪತಂಜಲಿಯ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರನ್ನು ಖುದ್ದಾಗಿ ಹಾಜರಾಗುವಂತೆ ಕಳೆದ ವಿಚಾರಣೆಯ ವೇಳೆ ಸೂಚಿಸಿದ್ದ ಸುಪ್ರೀಂ ಕೋರ್ಟ್
ಅದೇ ಸಮಯ ಸಂಸ್ಥೆಯನ್ನು ತೀವ್ರವಾಗಿ ತರಾಟೆಗೂ ತೆಗೆದುಕೊಂಡಿತ್ತು. ಇದೆ ವೇಳೆ ಕ್ರಮಕ್ಕೆ ಸಿದ್ದರಾಗಿ ಎಂದು ಇಂದಿನ ವಿಚಾರಣೆಯ ವೇಳೆ ಬಾಬಾ ರಾಮ್ ದೇವ್ ಅವರಿಗೆ ಸುಪ್ರೀಂಕೋರ್ಟ್ ಕಟು ಎಚ್ಚರಿಕೆ ನೀಡಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth