ಆಕ್ಷೇಪಾರ್ಹ ಪೋಸ್ಟ್ ಹರಡಿದ ಬಜರಂಗದಳದ ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ - Mahanayaka

ಆಕ್ಷೇಪಾರ್ಹ ಪೋಸ್ಟ್ ಹರಡಿದ ಬಜರಂಗದಳದ ಕಿಡಿಗೇಡಿಯ ವಿರುದ್ಧ ಕಠಿಣ ಕ್ರಮಕ್ಕೆ ಪಾಪ್ಯುಲರ್ ಫ್ರಂಟ್ ಆಗ್ರಹ

hubballi
18/04/2022

ಹುಬ್ಬಳ್ಳಿಯಲ್ಲಿ ನಡೆದ ಅಹಿತಕರ ಘಟನೆಯು ಖಂಡನಾರ್ಹವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹರಡಿದ ಬಜರಂಗದಳದ ಕಿಡಿಗೇಡಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಅಗ್ನಾಡಿ ಆಗ್ರಹಿಸಿದ್ದಾರೆ.


Provided by

ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ದುಷ್ಕೃತ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದು ಕೋಮು ಉದ್ವಿಗ್ನತೆ ಸೃಷ್ಟಿಸಿ ಗಲಭೆ ಹರಡುವ ಸಂಘಪರಿವಾರದ ಯೋಜಿತ ಷಡ್ಯಂತ್ರದ ಭಾಗವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮರ ಭಾವನೆಗಳಿಗೆ ನೋವುಂಟು ಮಾಡುವ ಪೋಸ್ಟ್ಗಳು ಸಾಕಷ್ಟು ಸಂಖ್ಯೆಯಲ್ಲಿವೆ. ಆದರೂ ಅದನ್ನು ತೆರವುಗೊಳಿಸುವ ಮತ್ತು ಕಿಡಿಗೇಡಿಗಳನ್ನು ಬಂಧಿಸುವ ಕ್ರಮವನ್ನು ಪೊಲೀಸ್ ಇಲಾಖೆ ಕೈಗೊಂಡಿಲ್ಲ. ಈ ಹಿಂದೆ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಲ್ಲಿ ನಡೆದ ಘಟನೆಗೂ ಮುನ್ನ ಬಿಜೆಪಿ ಕಾರ್ಯಕರ್ತನೋರ್ವ ಇದೇ ರೀತಿಯ ವಿಕೃತಿ ಮೆರೆದಿದ್ದ. ಆದಾಗ್ಯೂ, ಪೊಲೀಸರು ಆತನ ಮೇಲೆ ದುರ್ಬಲ ಸೆಕ್ಷನ್ ಹಾಕಿದ ಪರಿಣಾಮ ಆತ ಶೀಘ್ರದಲ್ಲೇ ಬಿಡುಗಡೆಗೊಂಡಿದ್ದ.

ಸಂಘಪರಿವಾರದ ಕಿಡಿಗೇಡಿಗಳ ಪರ ಪೊಲೀಸರ ಇಂತಹ ಮೃಧು ಧೋರಣೆಗಳು ಮುಸ್ಲಿಮ್ ವಿರೋಧಿ ಕೃತ್ಯ ನಡೆಸುವ ಕಿಡಿಗೇಡಿಗಳಲ್ಲಿ ನೈತಿಕ ಸ್ಥೈರ್ಯ ತುಂಬುತ್ತಿದೆ. ಇಂತಹ ಘಟನೆಗಳು ನಡೆದ ಸಂದರ್ಭದಲ್ಲಿ ಆಕ್ರೋಶಿತ ಜನರು ತಮ್ಮ ಆಕ್ರೋಶ ವ್ಯಕ್ತಪಡಿಸುವ ಮೊದಲೇ ಪೊಲೀಸ್ ಇಲಾಖೆ ಸಮುದಾಯದ ಮುಖಂಡರನ್ನು ವಿಶ್ವಾಸಕ್ಕೆ ಪಡೆದುಕೊಂಡು ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಬೇಕು. ಈ ರೀತಿಯ ಕ್ರಮಗಳಿಂದ ಸಾಂಭಾವ್ಯ ಅನಾಹುತಗಳನ್ನು ತಡೆಯಬಹುದು ಎಂದು ಪಾಪ್ಯುಲರ್ ಫ್ರಂಟ್ ಭಾವಿಸುತ್ತದೆ ಎಂದಿದ್ದಾರೆ.


Provided by

ಇಂತಹ ಸೂಕ್ಷ್ಮ ಸನ್ನಿವೇಶಲ್ಲಿ ಮುಸ್ಲಿಮ್ ಸಮುದಾಯವು ಸಂಯಮದಿಂದ ವರ್ತಿಸಬೇಕು. ತಕ್ಷಣದ ಆಕ್ರೋಶವು ವಿರೋಧಿಗಳಿಗೆ ಮುಸ್ಲಿಮರ ಬೇಟೆಗೆ ಅವಕಾಶವನ್ನಷ್ಟೇ ಮಾಡಿಕೊಡಲಿದೆ. ಹುಬ್ಬಳ್ಳಿಯಲ್ಲಿ ನಡೆದಿರುವ ಅಹಿತಕರ ಘಟನೆಗೆ ಸಂಬಂಧಿಸಿ ಪೊಲೀಸರು ವಿಚಾರಣೆಯ ನೆಪದಲ್ಲಿ ಅಮಾಯಕ ಮುಸ್ಲಿಮ್ ಯುವಕರಿಗೆ ಚಿತ್ರಹಿಂಸೆ ನೀಡಬಾರದು.

ಆಕ್ಷೇಪಾರ್ಹ ಪೋಸ್ಟ್ ಹಾಕಿದ ಯುವಕನ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಮುಸ್ಲಿಮ್ ಸಮುದಾಯವೂ ಇಂತಹ ಘಟನೆಗಳ ವೇಳೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಕಾನೂನಾತ್ಮಕ ಮತ್ತು ಪ್ರಜಾಸತ್ತಾತ್ಮಕ ವಿಧಾನದಲ್ಲೇ ತಮ್ಮ ಆಕ್ರೋಶ ವ್ಯಕ್ತ ಪಡಿಸಬೇಕೆಂದು ಅಯ್ಯೂಬ್ ಅಗ್ನಾಡಿ ಮನವಿ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಹಿಂದುತ್ವದಿಂದ ಚುನಾವಣೆ ಗೆಲ್ಲಬಹುದು ಎನ್ನುವ ಬಿಜೆಪಿಯ ನಿರೀಕ್ಷೆಗೆ ಶಾಕ್ ನೀಡಿದ ಯಡಿಯೂರಪ್ಪ ಹೇಳಿಕೆ!

ಪರ್ಸಂಟೇಜ್ ಪಿತಾಮಹಾ ಸಿದ್ದರಾಮಯ್ಯ:  ಕುಮಾರಸ್ವಾಮಿ ಟ್ವೀಟ್ ಬಾಣ

ಮಂಗಳೂರು: ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: ಐವರು ಕಾರ್ಮಿಕರ ದಾರುಣ ಸಾವು

ಹುಬ್ಬಳ್ಳಿ ಅಹಿತಕರ ಘಟನೆ:  40 ಮಂದಿ ಪೊಲೀಸ್ ವಶಕ್ಕೆ

ಪುನರುತ್ಥಾನ – ಹೊಸ ಭರವಸೆಯ ಬೆಳಕು

 

ಇತ್ತೀಚಿನ ಸುದ್ದಿ