ಅಮರನಾಥ ಯಾತ್ರೆ ಆರಂಭ: ಮೊದಲ ಬ್ಯಾಚ್ ನಲ್ಲಿ ಎಷ್ಟು ಮಂದಿ ಭಕ್ತರಿದ್ದಾರೆ..?
ಇಂದಿನಿಂದ ಈ ವರ್ಷದ ಬಹು ನಿರೀಕ್ಷಿತ ಅಮರನಾಥ ಯಾತ್ರೆ ಆರಂಭವಾಗಿದೆ. 3.880 ಮೀಟರ್ ಎತ್ತರದಲ್ಲಿರುವ ಅಮರನಾಥ ದೇಗುಲಕ್ಕೆ ಸುಮಾರು 3,400 ಭಕ್ತರ ಮೊದಲ ಬ್ಯಾಚ್ ದಕ್ಷಿಣ ಕಾಶ್ಮೀರದ ಭಗವತಿ ನಗರದ ಬೇಸ್ ಕ್ಯಾಂಪ್ನಿಂದ ಯಾತ್ರೆ ಆರಂಭಿಸಿತು.
ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಈ ಯಾತ್ರೆಗೆ ಚಾಲನೆ ನೀಡಿದರು. ಕಳೆದ ವರ್ಷ ಪವಿತ್ರ ದೇಗುಲಕ್ಕೆ ಭೇಟಿ ನೀಡಿದ್ದ 3,65,000 ಯಾತ್ರಾರ್ಥಿಗಳಿಗೆ ಹೋಲಿಸಿದರೆ ಈ ವರ್ಷ 3,00,000 ಕ್ಕೂ ಹೆಚ್ಚು ಭಕ್ತರು ಅಮರನಾಥ ಯಾತ್ರೆಗೆ ನೋಂದಾಯಿಸಿಕೊಂಡಿದ್ದಾರೆ.
ಅಮರನಾಥ ಯಾತ್ರೆ ಜುಲೈ 1 ರಿಂದ ಪ್ರಾರಂಭವಾಗಿ ಆಗಸ್ಟ್ 31 ರಂದು ಕೊನೆಗೊಳ್ಳಲಿದೆ. 62 ದಿನಗಳ ಯಾತ್ರೆಯು ಸಮುದ್ರ ಮಟ್ಟದಿಂದ 13,500 ಅಡಿ ಎತ್ತರದಲ್ಲಿರುವ ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿರುವ ಭಗವಾನ್ ಶಿವನ ಗುಹಾ ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಸಾಕ್ಷಿಯಾಗಿದೆ.
ಎರಡು ಮಾರ್ಗಗಳಲ್ಲಿ ಈ ಯಾತ್ರೆ ನಡೆಯಲಿದೆ. ಅನಂತ್ನಾಗ್ ಜಿಲ್ಲೆಯ ನನ್ವಾನ್-ಪಹಲ್ಗಾಮ್ 48 ಕಿ.ಮೀ. ಮಾರ್ಗ ಹಾಗೂ ಗಂಡೆರ್ಬಾಲ್ ಜಿಲ್ಲೆಯ ಬಲ್ತಾಳ್ನ 14 ಕಿ.ಮೀ. ಮಾರ್ಗವಾಗಿ ಯಾತ್ರೆ ನಡೆಯಲಿದೆ. ಐಟಿಬಿಪಿ ಯೋಧರು ಯಾತ್ರೆಯ ಸಂಪೂರ್ಣ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಹೆದ್ದಾರಿಯಲ್ಲಿ ಭಾರತೀಯ ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇನ್ನು ಉಧಂಪುರದಲ್ಲಿ ಭದ್ರತಾ ಕರ್ತವ್ಯದಲ್ಲಿ ನಿರತವಾಗಿದ್ದ ವಾಹನ ಅಪಘಾತಕ್ಕೀಡಾದಿ ಮೂವರು ಗಾಯಗೊಂಡಿದ್ದಾರೆ.
ಕೇಂದ್ರಾಡಳಿತ ಪ್ರದೇಶ ಸರ್ಕಾರವು ಆಹಾರ, ವಸತಿ, ವಿದ್ಯುತ್, ನೀರು, ಭದ್ರತೆ ಮತ್ತು ತ್ಯಾಜ್ಯ ನಿರ್ವಹಣೆಗೆ ಸರಿಯಾದ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಲು ಅನೇಕ ಇಲಾಖೆಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ.
ಯಾತ್ರೆಯ ನೋಂದಣಿಯು ಏಪ್ರಿಲ್ 17 ಪ್ರಾರಂಭವಾಗಿತ್ತು. ಅಮರನಾಥ ಯಾತ್ರೆಯ ವೇಳಾಪಟ್ಟಿಯನ್ನು ಸಾಮಾನ್ಯವಾಗಿ ಹಿಂದೂ ಕ್ಯಾಲೆಂಡರ್ನ ಪ್ರಕಾರ ಸ್ಕಂದಷಷ್ಠಿಯ ಶುಭ ದಿನದೊಂದಿಗೆ ಹೊಂದಿಕೆಯಾಗುವಂತೆ ಯೋಜಿಸಲಾಗಿದೆ ಮತ್ತು ರಕ್ಷಾ ಬಂಧನ ಎಂದೂ ಕರೆಯಲ್ಪಡುವ ಶ್ರಾವಣ ಪೂರ್ಣಿಮೆಯಂದು ಮುಕ್ತಾಯವಾಗುತ್ತದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw