ಆಂಧ್ರ, ತೆಲಂಗಾಣದಲ್ಲಿ ಭಾರೀ ಮಳೆ: 10 ಮಂದಿ ಸಾವು, 140 ರೈಲುಗಳ ಸಂಚಾರ ರದ್ದು - Mahanayaka
5:02 AM Friday 20 - September 2024

ಆಂಧ್ರ, ತೆಲಂಗಾಣದಲ್ಲಿ ಭಾರೀ ಮಳೆ: 10 ಮಂದಿ ಸಾವು, 140 ರೈಲುಗಳ ಸಂಚಾರ ರದ್ದು

02/09/2024

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಕೆಲವು ಭಾಗಗಳು ಪ್ರವಾಹದಂತಹ ಪರಿಸ್ಥಿತಿಗಳನ್ನು ಎದುರಿಸುತ್ತಿವೆ. ಭಾನುವಾರ ಸುರಿದ ಧಾರಾಕಾರ ಮಳೆಯಿಂದಾಗಿ ವ್ಯಾಪಕ ಪ್ರವಾಹ ಮತ್ತು ಜಲಾವೃತವಾಗಿದ್ದು, ರಸ್ತೆ ಮತ್ತು ರೈಲು ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ.

ಭಾನುವಾರ ಸುರಿದ ಭಾರಿ ಮಳೆಯಿಂದಾಗಿ ಎರಡು ರಾಜ್ಯಗಳಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಭಾರಿ ಮಳೆಯ ಮುನ್ಸೂಚನೆಗೆ ಪ್ರತಿಕ್ರಿಯೆಯಾಗಿ, ಹೈದರಾಬಾದ್ ನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.

ಇನ್ನು ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದು, ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಪ್ರವಾಹ ಪರಿಸ್ಥಿತಿಯ ಬಗ್ಗೆಯೂ ಮೋದಿ ವಿಚಾರಿಸಿದರು.


Provided by

ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಜಾಗರೂಕರಾಗಿರಲು ಸೂಚನೆ ನೀಡಿದ್ದಾರೆ. ರೆಡ್ಡಿ ಅವರು ಭಾನುವಾರ ಮಳೆ ಪೀಡಿತ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸಚಿವರೊಂದಿಗೆ ಮಾತನಾಡಿದರು ಮತ್ತು ಮುಳುಗಿದ ಪ್ರದೇಶಗಳಲ್ಲಿನ ಪರಿಹಾರ ಕಾರ್ಯಾಚರಣೆಗಳ ಬಗ್ಗೆ ವಿಚಾರಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ