ತಮಿಳುನಾಡಿನಲ್ಲಿ ಸ್ಪರ್ಧಿಸಿದ್ದ ಅಣ್ಣಾಮಲೈ ಫಲಿತಾಂಶ ಏನಾಗಿದೆ ಗೊತ್ತಾ?
02/05/2021
ಚೆನ್ನೈ: ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ತಮಿಳುನಾಡು ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಆರಂಭಿಕ ಹಂತದಲ್ಲಿ ಅವರ ತೀವ್ರ ಹಿನ್ನಡೆ ಅನುಭವಿಸಿದ್ದಾರೆ.
ಅಣ್ಣಾಮಲೈಗೆ ಇದು ಮೊದಲ ಚುನಾವಣೆಯಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಆ ಬಳಿಕ ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದರು.
ತಮ್ಮ ಮೊದಲ ಚುನಾವಣೆಯಲ್ಲಿ ಅವರು ಸ್ವಕ್ಷೇತ್ರವಾಗಿರುವ ತಮಿಳುನಾಡಿನ ಅರವಕುರುಚ್ಚಿಯಿಂದ ಸ್ಪರ್ಧಿಸಿದ್ದರು. ಆದರೆ ಆರಂಭಿಕ ಹಂತದ ಮತ ಎಣಿಕೆಯ ವೇಳೆ ಅವರು ತೀವ್ರ ಹಿನ್ನಡೆ ಅನುಭವಿಸಿದ್ದು, ಇವರ ವಿರುದ್ಧ ಸ್ಪರ್ಧಿಸಿದ್ದ ಎಲಂಗೋ ಮುನ್ನಡೆ ಸಾಧಿಸಿದ್ದಾರೆ.