ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್: ಬಟ್ಟೆ ಅಂಗಡಿ ಹಾಕಿಸಿಕೊಡುವ ನೆಪದಲ್ಲಿ 5 ಲಕ್ಷ ರೂ. ವಂಚನೆ - Mahanayaka

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ಕೇಸ್: ಬಟ್ಟೆ ಅಂಗಡಿ ಹಾಕಿಸಿಕೊಡುವ ನೆಪದಲ್ಲಿ 5 ಲಕ್ಷ ರೂ. ವಂಚನೆ

chaithra kundapur
19/09/2023

ಉಡುಪಿ: ಬಿಜೆಪಿ ಮುಖಂಡ ಗೋವಿಂದ ಬಾಬು ಪೂಜಾರಿಗೆ  ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣದ ಬೆನ್ನಲ್ಲೇ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ರಹ್ಮಾವರ ತಾಲೂಕು ಕೋಡಿ ನಿವಾಸಿ ಸುದಿನ  ನೀಡಿರುವ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Provided by

2015 ರಲ್ಲಿ ತಾನು ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿದ್ದು, ಹಲವು ಮಂತ್ರಿಗಳ, ಸಚಿವರ ಹಾಗೂ ಶಾಸಕರ ನಿಕಟ ಸಂಪರ್ಕದಲ್ಲಿರುವುದಾಗಿ ಸುದೀನ‌ ಅವರನ್ನು ನಂಬಿಸಿದ್ದ ಚೈತ್ರ ಕುಂದಾಪುರ, ಉಡುಪಿ ಹಾಗೂ ಕೋಟದಲ್ಲಿ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ತಿಳಿಸಿದ್ದಳು. ಈ ಹಿನ್ನೆಲೆಯಲ್ಲಿ ಆಕೆ ಸುದಿನ ಅವರಿಂದ  2018 ರಿಂದ 2022ರ ವರೆಗೆ ಸುಮಾರು ರೂಪಾಯಿ ಐದು ಲಕ್ಷವನ್ನು ಪಡೆದಿದ್ದಳು.

ಸುಮಾರು ಮೂರು ಲಕ್ಷ ಹಣವನ್ನು ಸುದೀನ ತನ್ನ ಖಾತೆ ಯಿಂದ ಚೈತ್ರಾಳ ಖಾತೆಗೆ ವರ್ಗಾಯಿಸಿದ್ದರು. ಉಳಿದ ಮೊತ್ತವನ್ನು ನಗದು ರೂಪದಲ್ಲಿ ನೀಡಿದ್ದರು. ಪ್ರತಿ ಬಾರಿಯೂ ಅಂಗಡಿಯ ಬಗ್ಗೆ ಚೈತ್ರಾಳಲ್ಲಿ ಕೇಳಿದಾಗ ಆಕೆ ಪ್ರತಿ ಬಾರಿಯೂ ಅಂಗಡಿ ಹಾಕುವ ಬಗ್ಗೆ ಈಗಾಗಲೇ ಸ್ಥಳೀಯ ಮುಖಂಡರಲ್ಲಿ ಮಾತುಕತೆ ನಡೆಸಿದ್ದು, ಅಂತಿಮ ಹಂತದಲ್ಲಿರುವುದಾಗಿ ನಂಬಿಸಿದ್ದಳು.


Provided by

ನಂತರದ ದಿನಗಳಲ್ಲಿ ಆಕೆಯು ಚುನಾವಣಾ ಪ್ರಚಾರ, ವಿವಿಧೆಡೆ ಭಾಷಣ-ಪ್ರವಚನ, ಕಾರ್ಯಕಾರಿಣಿ ಸಭೆ, ಪಕ್ಷದ ಮುಖಂಡರ ಭೇಟಿ ಇವುಗಳನ್ನು ನೆಪವಾಗಿರಿಸಿ, ದಿನಗಳನ್ನು ಮುಂದೂಡುತ್ತಾ ಬರುತ್ತಿದ್ದು ಇನ್ನಷ್ಟು ಹಣಕ್ಕೆ ಬೇಡಿಕೆಯನ್ನು ಇಟ್ಟಿರುತ್ತಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಚೈತ್ರಾಳ ಬಗ್ಗೆ ಅನುಮಾನಗೊಂಡ ಸುದಿನ ಅವರು ನನಗೆ ಕೂಡಲೇ ಬಟ್ಟೆ ಅಂಗಡಿಯನ್ನು ಹಾಕಿ, ಕೊಡುವಂತೆ ಅಥವಾ ನಾನು ನೀಡಿದ ಹಣವನ್ನು ಸಂಪೂರ್ಣವಾಗಿ ವಾಪಾಸು ನೀಡುವಂತೆ ಕೇಳಿಕೊಂಡರು. ಆಗ ಚೈತ್ರಾಳು ಸುದಿನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣವನ್ನು ದಾಖಲಿಸುವುದಾಗಿ ಹಾಗೂ ಬಾಡಿಗೆ ಗೂಂಡಾಗಳಿಂದ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆಯನ್ನು ಹಾಕಿದ್ದಳು.

ಇತ್ತೀಚೆಗೆ ಚೈತ್ರಾಳು ಇನ್ನಷ್ಟು ಜನರಿಗೆ ವಂಚಿಸಿದ ಬಗ್ಗೆ ಮಾಧ್ಯಮಗಳಲ್ಲಿ ನೋಡಿ ನನಗೆ ಮೋಸ ಮಾಡಿ, ನನ್ನಿಂದ ಹಣವನ್ನು ಲಪಟಾಯಿಸುವ ಉದ್ದೇಶದಿಂದ ನನಗೆ ಬಟ್ಟೆ ಅಂಗಡಿಯನ್ನು ಹಾಕಿಕೊಡುವುದಾಗಿ ನಂಬಿಸಿ ನನ್ನಿಂದ ಸುಮಾರು ಐದು ಲಕ್ಷ ರೂಪಾಯಿ ಪಡೆದು ಬಟ್ಟೆ ಅಂಗಡಿಯನ್ನು ಹಾಕಿ ಕೊಡದೆ, ಹಣವನ್ನು ವಾಪಾಸು ನೀಡದೆ, ಹಣವನ್ನು ಕೇಳಿದ ನನಗೆ ಜೀವ ಬೆದರಿಕೆಯನ್ನು ಹಾಕಿದ್ದಾಳೆ ಎಂದು ಸುದೀನ ಕೋಟ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ