ಭೀಕರ ಅಪಘಾತ: ಕಾರಿನಲ್ಲಿದ್ದ ನಾಲ್ವರು  ಸ್ಥಳದಲ್ಲಿಯೇ ಸಾವು

13/02/2021

ಹಾಸನ: ಇಲ್ಲಿನ ಚನ್ನರಾಯಪಟ್ಟಣದ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಂಟೈನರ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟವರೆಲ್ಲರು ಬೆಂಗಳೂರಿನ ನಿವಾಸಿಗಳು ಎಂದು ತಿಳಿದು ಬಂದಿದೆ.

ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

Exit mobile version