ಅರಣ್ಯ ಪ್ರದೇಶಕ್ಕೆ ಬೆಂಕಿ | ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ - Mahanayaka

ಅರಣ್ಯ ಪ್ರದೇಶಕ್ಕೆ ಬೆಂಕಿ | ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

charmadi
26/01/2022

ಚಿಕ್ಕಮಗಳೂರು: ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಗುಡ್ಡಗಳಲ್ಲಿ ಬೆಳೆದು ನಿಂತಿರುವ ಹುಲ್ಲುಗಳು ಬಿರು ಬಿಸಿಲಿಗೆ ಒಣಗಿ ನಿಂತಿದ್ದು, ಯಾರೋ ಪ್ರವಾಸಿಗಳು ಸಿಗರೇಟ್ ಸೇದಿ ಎಸೆದಿರುವ ಕಾರಣ ಬೆಟ್ಟಕ್ಕೆ ಬೆಂಕಿ ಹತ್ತಿಕೊಂಡಿದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಗುಡ್ಡಕ್ಕೆ ಬೆಂಕಿ ಬಿದ್ದ ಪರಿಣಾಮ ನೂರಾರು ಪ್ರಾಣಿ-ಪಕ್ಷಿಗಳು, ಕೀಟಗಳು ಬೆಂಕಿಯಲ್ಲಿ ಬೆಂದಿವೆ. ಅರಣ್ಯಾಧಿಕಾರಿಗಳು ತಕ್ಷಣವೇ ಬೆಂಕಿ ನಂದಿಸಿದ್ದರಿಂದಾಗಿ ಸಾವಿರಾರು ಎಕರೆ ಪ್ರದೇಶದ ಜೀವ ಸಂಕುಲ ಬೆಂಕಿಗೆ ಆಹುತಿಯಾಗುತ್ತಿದ್ದವು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ವಿಮಾನ ನಿಲ್ದಾಣದಲ್ಲಿ 29 ಲಕ್ಷ ರೂ. ಮೌಲ್ಯದ ಚಿನ್ನ ವಶ

ಆರ್ಯಭಟ ಪ್ರಶಸ್ತಿ ಪುರಸ್ಕೃತ ಖ್ಯಾತ ಗಾಯಕಿ ಶೀಲಾ ದಿವಾಕರ್ ನಿಧನ

ಕಡಿಮೆ ಬೆಲೆಯ ಚಿನ್ನಾಭರಣ ಖರೀದಿಸಲು ಹೋಗಿದ್ದ ಯುವಕ ಶವವಾಗಿ ಪತ್ತೆ!

ಮಗಳು ಮೊಬೈಲ್ ನಲ್ಲಿ ಕಾಲ ಕಳೆಯುತ್ತಾಳೆ ಎಂದು ಆರೋಪಿಸಿ ತಂದೆಯಿಂದಲೇ ಅತ್ಯಾಚಾರ!

 

 

ಇತ್ತೀಚಿನ ಸುದ್ದಿ