ಅತ್ಯಾಚಾರದಿಂದ ಬಾಲಕಿ ಗರ್ಭಿಣಿ: ತಂದೆಗೆ ವಿಷಯ ಹೇಳುತ್ತೇನೆ ಎಂದಿದ್ದಕ್ಕೆ ಯುವಕನಿಂದ ಘೋರ ಕೃತ್ಯ - Mahanayaka

ಅತ್ಯಾಚಾರದಿಂದ ಬಾಲಕಿ ಗರ್ಭಿಣಿ: ತಂದೆಗೆ ವಿಷಯ ಹೇಳುತ್ತೇನೆ ಎಂದಿದ್ದಕ್ಕೆ ಯುವಕನಿಂದ ಘೋರ ಕೃತ್ಯ

uttar pradesh
29/09/2021

ಬರೇಲಿ:  ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಯುವಕನೋರ್ವ ಆಕೆ ಗರ್ಭಿಣಿಯಾಗಿದ್ದಾಳೆ ಎನ್ನುವುದು ತಿಳಿಯುತ್ತಿದ್ದಂತೆಯೇ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಾಪತ್ತೆಯಾಗಿದ್ದ 16 ವರ್ಷದ ಬಾಲಕಿಯ ಮೃತದೇಹ ಬರೇಲಿಯ ಡಿಯೋರಾನಿಯಾ ಪ್ರದೇಶದ ಹಳ್ಳಿಯಲ್ಲಿ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ನಡೆಸಿದಾಗ ಬಾಲಕಿಯು ನಾಲ್ಕು ತಿಂಗಳ ಗರ್ಭಿಣಿ ಎನ್ನುವುದು ತಿಳಿದು ಬಂದಿತ್ತು. ಇದರಿಂದಾಗಿ ಪೊಲೀಸರ ಅನುಮಾನ ಇನ್ನೂ ದಟ್ಟವಾಯಿತು.

ಈ ನಡುವೆ ಈ ಕೊಲೆಯಲ್ಲಿ  ಭಾಗವತ್ ಶರಣ್ ಎಂಬಾತನ ಕೈವಾಡ ಇದೆ ಎನ್ನುವುದು ಪೊಲೀಸರಿಗೆ ಮಾಹಿತಿ ಬಂದಿದ್ದು, ಇದೇ ವೇಳೆಯಲ್ಲಿ ಆರೋಪಿ ಭಾಗವತ್ ಊರು ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ, ಅದಕ್ಕೆ ಅವಕಾಶ ನೀಡದ ಪೊಲೀಸರು ತಕ್ಷಣವೇ ಆತನನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.


Provided by

20 ವರ್ಷ ವಯಸ್ಸಿನ ಭಾಗವತ್ ಶರಣ್ 6 ತಿಂಗಳುಗಳಿಂದ ಬಾಲಕಿಯ ಜೊತೆಗೆ ದೈಹಿಕ ಸಂಬಂಧ ಹೊಂದಿದ್ದು, ಇದರ ಪರಿಣಾಮವಾಗಿ ಆಕೆ ಗರ್ಭಿಣಿಯಾಗಿದ್ದಾಳೆ. ಆರಂಭದಲ್ಲಿ ಆಕೆಗೆ ಗರ್ಭಪಾತ ಮಾಡಿದಲು ಔಷಧಿಗಳನ್ನು ಕೂಡ ನೀಡಿದ್ದ ಎನ್ನಲಾಗಿದೆ. ಆದರೆ ಅದರಿಂದ ಯಾವುದೇ ಪ್ರಯೋಜನವಾಗಿರಲಿಲ್ಲ.

ಇದೇ ಸಂದರ್ಭದಲ್ಲಿ ಬಾಲಕಿಯು, ಇನ್ನು ನನ್ನಿಂದ ಈ ವಿಚಾರ ಮುಚ್ಚಿಡಲು ಸಾಧ್ಯವಿಲ್ಲ. ನಾನು ತಂದೆಗೆ ಈ ವಿಚಾರ ತಿಳಿಸುತ್ತೇನೆ. ನಿನ್ನ ಹೆಸರನ್ನು ಹೇಳುತ್ತೇನೆ ಎಂದು ಬಾಲಕಿ ಹೇಳಿದ್ದಾಳೆ. ಇದರಿಂದ ಭಾಗವತ್ ಹೆದರಿದ್ದು, ಬಾಲಕಿಯನ್ನು ಕೊಲೆ ಮಾಡಲು ಪ್ಲಾನ್ ಮಾಡಿ, ನಿರ್ಜನ ಸ್ಥಳಕ್ಕೆ ಕರೆದೊಯ್ದು, ಹಗ್ಗದಿಂದ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರ ವಿಚಾರಣೆಯ ವೇಳೆ ಆರೋಪಿಯು ಬಾಯ್ಬಿಟ್ಟಿದ್ದಾನೆ.

ಸದ್ಯ ಆರೋಪಿಯನ್ನು ಬಂಧಿಸಿ, ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ಕ್ರಮಕೈಗೊಳ್ಳಲಾಗಿದೆ ಎಂದು ಬರೇಲಿ ಎಸ್‌ ಎಸ್‌ ಪಿ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಕೃಷ್ಣನ ಚಕ್ರ, ಟಿಪ್ಪುವಿನ ಸಿಂಹಾಸನ ಮಾರಾಟ ಮಾಡಿದ ಆರೋಪಿ ಅರೆಸ್ಟ್!

ಹೃದಯಾಘಾತವಾಗುವುದಕ್ಕೂ ಮೊದಲು ಕಂಡು ಬರುವ ಲಕ್ಷಣಗಳೇನು?

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸಾಪ್ ಸಂದೇಶ ಕಳುಹಿಸಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ನಾಪತ್ತೆ!

ಸ್ವಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ | ಸಿಎಂ ಬಸವರಾಜ ಬೊಮ್ಮಾಯಿ

ಕಡಬ: ಯುವತಿಯ ಮೇಲೆ ಅತ್ಯಾಚಾರ, ಗರ್ಭಪಾತ | ಕಾನ್ ಸ್ಟೇಬಲ್ ಅರೆಸ್ಟ್

ಗೋಶಾಲೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 98 ಎಕರೆ ಪ್ರದೇಶಕ್ಕೆ ಗುರುತು | ಸಚಿವ ಎಸ್.ಅಂಗಾರ

ಗರ್ಭಿಣಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ರೈಲ್ವೆ ಹಳಿಯಲ್ಲಿ ಎಸೆದು ಹೋದ ಕಾಮುಕರು

ಇತ್ತೀಚಿನ ಸುದ್ದಿ