ಅತಿಥಿ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳು: ಹೋರಾಟಕ್ಕೆ ಕ್ಯಾಂಪಸ್ ಫ್ರಂಟ್ ತೀರ್ಮಾನ - Mahanayaka
8:51 PM Friday 20 - September 2024

ಅತಿಥಿ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳು: ಹೋರಾಟಕ್ಕೆ ಕ್ಯಾಂಪಸ್ ಫ್ರಂಟ್ ತೀರ್ಮಾನ

cfi
26/12/2021

ಮಂಗಳೂರು: ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸರಕಾರ ಅವರ ಬೇಡಿಕೆಗಳನ್ನು ಈಡೇರಿಸದೇ ಚೆಲ್ಲಾಟವಾಡುತ್ತಿರುವುದು ಖಂಡನೀಯ. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲು ಸರ್ಕಾರ ಮುಂದಾಗಬೇಕು ಎಂಬ ನಿಟ್ಟಿನಲ್ಲಿ ಅತಿಥಿ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳು  ಎಂಬ ಘೋಷ ವಾಕ್ಯದಲ್ಲಿ ಹೋರಾಟ ಸಂಘಟಿಸಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ತೀರ್ಮಾನಿಸಿದೆ ಎಂದು ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 14,447 ಅತಿಥಿ ಶಿಕ್ಷಕರಿದ್ದಾರೆ. ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಅರೆಕಾಲಿಕವಾಗಿ ಅಲ್ಪವೇತನ ಪಡೆದುಕೊಂಡು ಸಮಾಜದಲ್ಲಿ ಸ್ವಾಭಿಮಾನದ ಬದುಕನ್ನು ಕಟ್ಟಿಕೊಂಡಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳಿಗೆ ಉಪನ್ಯಾಸ ನೀಡುವ ಶಿಕ್ಷಕರು ಮಾಸಿಕವಾಗಿ ಹನ್ನೊಂದು ಸಾವಿರದಿಂದ ಹದಿಮೂರು ಸಾವಿರದಷ್ಟು ವೇತನವನ್ನು ಪಡೆಯುತ್ತಿದ್ದಾರೆ. ವರ್ಷದಲ್ಲಿ ಎಂಟು ತಿಂಗಳು ಮಾತ್ರ ವೇತನ ಸಿಗುವುದಾದರೂ, ಅದು ಕೈ ಸೇರಲು ಮೂರು ತಿಂಗಳು ಕಾಯಬೇಕಿದೆ ಎಂದರು.

ಉದ್ಯೋಗದಲ್ಲಿ ಯಾವುದೇ ಭಧ್ರತೆಯಾಗಲಿ, ಪಿಎಫ್ ,ಇಎಸ್ಐ ಸಹಿತ ಯಾವುದೇ ಸೌಲಭ್ಯಗಳಿಲ್ಲದೆ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಬೀದಿಗೆ ಬರುವಂತಾಗಿದೆ. ಕಳೆದ ಲಾಕ್‌ಡೌನ್ ಸಂದರ್ಭದಲ್ಲಿ 163 ಅತಿಥಿ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆಂದು ವರದಿಯಾಗಿದೆ. ಅದರಲ್ಲಿ ಕೆಲವರು ಮನೆಯ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಸರಿಯಾದ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಪ್ರಾಣ ಕಳೆದುಕೊಂಡಿದ್ದಾರೆ. ಅವರಿಗೆ ಯಾವುದೇ ಪರಿಹಾರ ಧನವಾಗಲಿ ಕನಿಷ್ಟ ಪಕ್ಷ ಸಾಂತ್ವನವಾಗಲಿ ದೊರಕಿಲ್ಲ ಎಂದು ಅವರು ಹೇಳಿದರು.


Provided by

ಸಮಾಜವನ್ನು ಶೈಕ್ಷಣಿಕವಾಗಿ ಕಟ್ಟಿಬೆಳೆಸುವಲ್ಲಿ ಮಹತ್ತರವಾದ ಪಾತ್ರ ನಿರ್ವಹಿಸುವ ಅತಿಥಿ ಉಪನ್ಯಾಸಕರನ್ನು ತಕ್ಷಣ ಖಾಯಂಗೊಳಿಸಬೇಕು. ಉದ್ಯೋಗ ಭಧ್ರತೆಯೊಂದಿಗೆ ಪಿಎಫ್, ಇಎಸ್ ಐ ನೀಡಬೇಕು. ಗೌರವಧನ ಹೆಚ್ಚಿಸಬೇಕು. ಬಾಕಿ ಇರುವ ಗೌರವಧನವನ್ನು ತಕ್ಷಣ ಮಂಜೂರುಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪರಿಹಾರ ಧನ ನೀಡಬೇಕೆಂಬ ನ್ಯಾಯಬದ್ಧ ಬೇಡಿಕೆಗಳನ್ನು ಆಲಿಸದೆ ಸರಕಾರದ ಮೀನಾ ಮೇಷ ಎಣಿಸುತ್ತಿರುವುದು ಆಕ್ಷೇಪಾರ್ಹ. ಇಷ್ಟೆಲ್ಲಾ ಜ್ವಲಂತ ಸಮಸ್ಯೆಗಳಿಂದ ತೀವ್ರ ಸಂಕಷ್ಟದಲ್ಲಿರುವ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಲು ಸರಕಾರ ಮುಂದಾಗದೆ, ಇನ್ನೂ ಸಮಸ್ಯೆಗಳ ವರದಿ ಮಾಡಲು ಸಮಿತಿ ರಚನೆ ಮಾಡಿದೆ. ಉಪನ್ಯಾಸಕರ ಬೇಡಿಕೆಗಳನ್ನು ಅರಿಯದ ಸರಕಾರ ವರದಿ ಸಮಿತಿ ಎಂಬ ತೋರಿಕೆಯಲ್ಲಿ ಕಾಲ ಕಳೆಯುವತ್ತಿರುವುದು ವಿಪರ್ಯಾಸವೇ ಸರಿ. ಸಮಿತಿಯ ವರದಿಗೆ ಕಾಯದೆ ತಕ್ಷಣ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಮುಂದಾಗಬೇಕು ಈ ಎಲ್ಲ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕ್ಯಾಂಪಸ್ ಫ್ರಂಟ್,  ಅತಿಥಿ ಶಿಕ್ಷಕರೊಂದಿಗೆ ಜೊತೆ ಸೇರಿ ಹೋರಾಟ ನಡೆಸುವಂತೆ ತೀರ್ಮಾನಿಸಲಾಗಿದೆಯೆಂದು ರಾಜ್ಯಾಧ್ಯಕ್ಷರಾದ ಅಥಾವುಲ್ಲ ಪುಂಜಾಲಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮುಸ್ಲಿಮರನ್ನು, ಕ್ರೈಸ್ತರನ್ನು ಘರ್ ವಾಪಸಿ ಮಾಡದೇ ಬೇರೆ ದಾರಿಯಿಲ್ಲ | ಸಂಸದ ತೇಜಸ್ವಿ ಸೂರ್ಯ

ಕಳೆದ 7 ವರ್ಷಗಳಿಂದ ಮೋದಿ ಸರ್ಕಾರ ‘ಉತ್ತಮ ಆಡಳಿತ’ ನೀಡುತ್ತಿದೆ | ಅಮಿತ್ ಶಾ

ರಾಜಸ್ಥಾನ: ಮಿಗ್​-21 ಫೈಟರ್​ ಜೆಟ್​ ಪತನ; ಪೈಲಟ್​ ವಿಂಗ್​ ಕಮಾಂಡರ್ ಹುತಾತ್ಮ​

ದೇವೇಗೌಡ ಪ್ರಧಾನಿಯಾಗಲು ಕಾಂಗ್ರೆಸ್ ಕಾರಣ: ಡಿ.ಕೆ. ಶಿವಕುಮಾರ್

ಮೂಡುಬಿದಿರೆ: ಎಸ್​ ಕೆಎಫ್​ ಕಾರ್ಖಾನೆಯಿಂದ ತೊಂದರೆ: ಗ್ರಾಮಸ್ಥರಿಂದ ಅಹೋರಾತ್ರಿ ಪ್ರತಿಭಟನೆ

ಉತ್ತರಾಖಂಡ್: ಸಚಿವ ಹರಕ್ ಸಿಂಗ್, ಶಾಸಕರೊಬ್ಬರ ದಿಢೀರ್ ರಾಜೀನಾಮೆ

ತಮಿಳು ಖ್ಯಾತ ಹಾಸ್ಯ ನಟ ವಡಿವೇಲುಗೆ ಅನಾರೋಗ್ಯ: ಶೀಘ್ರ ಚೇತರಿಕೆಗೆ ಅಭಿಮಾನಿಗಳಿಂದ ಪ್ರಾರ್ಥನೆ

ಇತ್ತೀಚಿನ ಸುದ್ದಿ