ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ನ್ನು ಕೊಚ್ಚಿ ಕೊಲೆಗೈದ ದರೋಡೆಕೋರರು! - Mahanayaka
2:05 AM Friday 20 - September 2024

ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ನ್ನು ಕೊಚ್ಚಿ ಕೊಲೆಗೈದ ದರೋಡೆಕೋರರು!

ballary
23/11/2021

ಬಳ್ಳಾರಿ: ಎಟಿಎಂ ದೋಚಲು ಬಂದಿದ್ದ ದುಷ್ಕರ್ಮಿಗಳು ಬ್ಯಾಂಕ್ ಸೆಕ್ಯೂರಿಟಿ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಐಸಿಐಸಿಐ ಬ್ಯಾಂಕ್ ಎಟಿಎಂ ಬಳಿಯಲ್ಲಿ ನಡೆದಿದ್ದು, ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದೆ.

ರಾತ್ರಿ ವೇಳೆ ಸೆಕ್ಯೂರಿಟಿ ಗಾರ್ಡ್ ಮಲಗಿದ್ದು, ಈ ವೇಳೆ ಬ್ಯಾಂಕ್ ದರೋಡೆಗೆ ಆಗಮಿಸಿದ್ದ ದುಷ್ಕರ್ಮಿಗಳು ಮಲಗಿದ್ದ ಸೆಕ್ಯೂರಿಟಿ ಗಾರ್ಡ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಬಸವರಾಜ ಎಂಬವರು ಹತ್ಯೆಗೀಡಾದ ಸೆಕ್ಯೂರಿಟಿ ಗಾರ್ಡ್ ಆಗಿದ್ದು, ಎಟಿಎಂ ಹಾಗೂ ಐಸಿಐಸಿಐ ಬ್ಯಾಂಕ್ ಅಕ್ಕಪಕ್ಕದಲ್ಲೇ ಇದ್ದು, ದರೋಡೆಗೆ ಯತ್ನಿಸಿ ಸೆಕ್ಯೂರಿಟಿ ಗಾರ್ಡ್ ನ್ನು ಹತ್ಯೆ ಮಾಡಿದರೋ ಅಥವಾ ವೈಯಕ್ತಿಕ ವಿಚಾರಕ್ಕೆ ಹತ್ಯೆ ನಡೆದಿದೆಯೇ ಎನ್ನುವುದು ಇನ್ನೂ ತಿಳಿದು ಬಂದಿಲ್ಲ.


Provided by

ಹತ್ಯೆಗೀಡಾಗಿರುವ ಬಸವರಾಜ್ ಕಳೆದ 10 ತಿಂಗಳಿನಿಂದ ಈ ಬ್ಯಾಂಕ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲ್ ಅಡಾವತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ದೇವಸ್ಥಾನಕ್ಕೆ 20 ಸಾವಿರ ರೂಪಾಯಿ ದೇಣಿಗೆ ನೀಡಿದ ಭಿಕ್ಷುಕಿ!

ಸ್ಕೂಲ್ ಬಸ್ ತಪ್ಪಿ ಹೋಯಿತು ಎಂದು ಆತ್ಮಹತ್ಯೆ ಮಾಡಿಕೊಂಡ ಬಾಲಕ!

ಮಂಗಳೂರು: 8 ವರ್ಷದ ಬಾಲಕಿಯ ಹತ್ಯೆ ಪ್ರಕರಣ | 20 ಮಂದಿ ಪೊಲೀಸ್ ವಶಕ್ಕೆ

ಸೆಲ್ಫಿ ವಿಡಿಯೋಗಾಗಿ ಪ್ರಾಣವನ್ನೇ ಕಳೆದುಕೊಂಡ ಬಾಲಕ

ಮಗಳ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದ ತಂದೆಯನ್ನು ಕೊಚ್ಚಿ ಕೊಂದ ಮಗಳ ಸ್ನೇಹಿತರು!

ರಾಜ್ಯ ಪ್ರವಾಹ ಸಂಕಷ್ಟದಲ್ಲಿರುವಾಗ ಬಿಜೆಪಿ—ಕಾಂಗ್ರೆಸ್ ನ ಬೇಜವಾಬ್ದಾರಿಯ ಜನ‘ಜಾತ್ರೆ’

ಮಾಂಸಾಹಾರದ ಬಗ್ಗೆ ಹಿರಿಯ ಪೇಜಾವರ ಶ್ರೀಗಳು ಏನು ಹೇಳಿದ್ದರು? | ವಿಡಿಯೋ ವೈರಲ್

ಇತ್ತೀಚಿನ ಸುದ್ದಿ