ಸಿಡಿಎಸ್‌ ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ: ಅಂತಿಮ ತನಿಖಾ ವರದಿ ಬಹಿರಂಗ - Mahanayaka
5:32 AM Friday 20 - September 2024

ಸಿಡಿಎಸ್‌ ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ: ಅಂತಿಮ ತನಿಖಾ ವರದಿ ಬಹಿರಂಗ

bipin rawat
15/01/2022

ನವದೆಹಲಿ: ಸಿಡಿಎಸ್ ಬಿಪಿನ್‌ ರಾವತ್‌ ಅವರಿದ್ದ ವಾಯುಪಡೆಯ ಹೆಲಿಕಾಪ್ಟರ್ ದುರಂತ ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ಅಂತಿಮ ತನಿಖಾ ವರದಿ ಬಹಿರಂಗಗೊಂಡಿದೆ.

ಭಾರತಿಯ ವಾಯು ಸೇನೆ ನೀಡಿರುವ ಮಾಹಿತಿ ಪ್ರಕಾರ ಪ್ರತಿಕೂಲ ಹವಾಮಾನವೇ ಹೆಲಿಕಾಪ್ಟರ್‌ ಪತನಕ್ಕೆ ಕಾರಣ. ಹಠಾತ್‌ ಪ್ರತಿಕೂಲ ಹವಾಮಾನದ ಪರಿಣಾಮ ಹೆಲಿಕಾಪ್ಟರ್‌ ಮೋಡವನ್ನು ಪ್ರವೇಶಿಸಿತು. ಕಣಿವೆಯಲ್ಲಿನ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆಯಿಂದಾಗಿ ಕಾಪ್ಟರ್‌ ಮೋಡಗಳಿಗೆ ಪ್ರವೇಶಿಸಿದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ.

ದುರಂತ ಘಟನೆಗೆ ಕಾರಣವಾಗಿರಬಹುದಾದ ಎಲ್ಲ ಸನ್ನಿವೇಶಗಳನ್ನು ತನಿಖಾ ತಂಡವು ವಿಶ್ಲೇಷಿಸಿದ್ದು,  ಪ್ರಾಥಮಿಕ ತನಿಖೆಯ ಬಳಿಕ ಈ ದುರಂತಕ್ಕೆ ಪ್ರತಿಕೂಲ ಹವಾಮಾನದಲ್ಲಿ ಹೆಲಿಕಾಪ್ಟರ್ ಹಾರಾಟವೇ ಕಾರಣ, ತಾಂತ್ರಿಕ ದೋಷವಲ್ಲ ಎಂದು ತಿಳಿದು ಬಂದಿದೆ.


Provided by

ಕಣಿವೆಯಲ್ಲಿನ ಹವಾಮಾನ ಪರಿಸ್ಥಿತಿಗಳಲ್ಲಿನ ಅನಿರೀಕ್ಷಿತ ಬದಲಾವಣೆಯಿಂದಾಗಿ ಮೋಡಗಳಿಗೆ ಪ್ರವೇಶಿಸಿದ ಪರಿಣಾಮವಾಗಿ ಅಪಘಾತ ಸಂಭವಿಸಿದೆ. ಇದು ಪೈಲಟ್‌ ನ ಪ್ರಾದೇಶಿಕ ದಿಗ್ಭ್ರಮೆಗೆ ಕಾರಣವಾಯಿತು. ಇದರ ಪರಿಣಾಮವಾಗಿ ನಿಯಂತ್ರಿತ ಫ್ಲೈಟ್ ಇನ್ಟು ಟೆರೇನ್ ಹಂತ ತಲುಪಿದೆ. ರೆಕಾರ್ಡರ್ ಮತ್ತು ಕಾಕ್‌ ಪಿಟ್ ವಾಯ್ಸ್ ರೆಕಾರ್ಡರ್ ಅಪಘಾತದ ಅತ್ಯಂತ ಸಂಭವನೀಯ ಕಾರಣವನ್ನು ನಿರ್ಧರಿಸಲು ಲಭ್ಯವಿರುವ ಎಲ್ಲಾ ಸಾಕ್ಷಿಗಳನ್ನು ಪ್ರಶ್ನಿಸುವುದರ ಜೊತೆಗೆ, ವಿಮಾನದ ಡೇಟಾವನ್ನು ವಿಶ್ಲೇಷಿಸಿದ ನಂತರ ತಂಡವು ಈ ಕಾರಣ ಕಂಡುಹಿಡಿದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೆಂಗಳೂರು ಮಾಲ್‌ ನಲ್ಲಿ ಅಗ್ನಿ ಅವಘಡ

ಕ್ರೀಡಾಳುಗಳಿಗೆ ಪಠ್ಯಕ್ರಮದಂತೆ ಸೂಕ್ತ ಮಾರ್ಗದರ್ಶನ ನೀಡಬೇಕಿದೆ: ಮುಖ್ಯಮಂತ್ರಿ ಬೊಮ್ಮಾಯಿ

ಇಂದು ಬಿಎಸ್‍ಪಿ ವರಿಷ್ಠೆ ಮಾಯಾವತಿ ಅವರ ಜನ್ಮದಿನ: ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ

ಪೊಲೀಸರ ವೇಷದಲ್ಲಿ ಮನೆಗೆ ದಾಳಿ ನಡೆಸಿ ಚಿನ್ನಾಭರಣ ದೋಚಿದ ಕಳ್ಳರು!

ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ; ರೈಲ್ವೆ ಸಚಿವರ ಭೇಟಿ, ತನಿಖೆಗೆ ಆದೇಶ

ಇತ್ತೀಚಿನ ಸುದ್ದಿ