ಬಿಜೆಪಿಯ ಅಧಿಕಾರವಧಿಯಲ್ಲಿ ಹಿಂದುತ್ವ ಅಪಾಯದ ಸ್ಥಿತಿಯಲ್ಲಿದೆ | ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ - Mahanayaka
10:05 AM Sunday 22 - September 2024

ಬಿಜೆಪಿಯ ಅಧಿಕಾರವಧಿಯಲ್ಲಿ ಹಿಂದುತ್ವ ಅಪಾಯದ ಸ್ಥಿತಿಯಲ್ಲಿದೆ | ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ

karkala congress protest
27/09/2021

ಕಾರ್ಕಳ: ಬಿಜೆಪಿಯ ಅಧಿಕಾರವಧಿಯಲ್ಲಿ ಹಿಂದುತ್ವ ಅಪಾಯದ ಸ್ಥಿತಿಯಲ್ಲಿದೆ. ಅಧಿಕಾರದ ಮದದಲ್ಲಿ ಬಿಜೆಪಿ ಧಾರ್ಮಿಕ ಪುಣ್ಯ ಕ್ಷೇತ್ರಗಳನ್ನು ನೆಲಸಮ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮರೋಳಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ಕೆಡವುತ್ತಿರುವುದರ ವಿರುದ್ಧ ಕಾರ್ಕಳ ಯೂತ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಸಹಭಾಗಿತ್ವದಲ್ಲಿ ನಡೆದ ಪಂಜಿನ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಧರ್ಮ ರಕ್ಷಣೆಯೇ ನನ್ನ ಮೂಲ ಉದ್ದೇಶ ಎಂದು ಡಂಗೂರ ಸಾರುತ್ತಿದ್ದ ಸಾರಿಗೆ ಸಚಿವ ವಿ.ಸುನೀಲ್ ಕುಮಾರ್ ಅವರು, ದೇವಸ್ಥಾನಗಳನ್ನು ಕೆಡವುತ್ತಿರುವುದನ್ನು ವಿರೋಧಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ತಮ್ಮ ಮಾತಿಗೆ ಬದ್ಧರಾಗಲಿ ಎಂದು ಅವರು ಸವಾಲು ಹಾಕಿದರು.

ಯೆಡಮೊಗ್ಗೆಯ ಉದಯ ಗಾಣಿಗ, ಬ್ರಹ್ಮಾವರದ ಪ್ರವೀಣ್ ಪೂಜಾರಿ ಕೊಲೆಗಟುಕತನ ಬಿಜೆಪಿಗರ ಧರ್ಮ. ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ನಿಮ್ಮದೇ ಆಳ್ವಿಕೆ ಇದೆಯಲ್ಲವೇ? ಅವತ್ತು ಬೊಬ್ಬಿರಿದವರು ಈಗ ನ್ಯಾಯ ಒದಗಿಸಿ. ಮೊದಲ ಬಾರಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದಾಗ ಹೆಬ್ರಿಯ ಸುಚೇತಾ ಕೊಲೆ ಪ್ರಕರಣಕ್ಕೆ ನ್ಯಾಯ ಒದಗಿಸುತ್ತೇನೆ ಎಂದು ಭರವಸೆ ನೀಡಿದರು. ತಾವು ಇಂಧನ ಸಚಿವರಾಗಿದ್ದೀರಿ. ನಂದಿತಾ ಕೊಲೆ ಪ್ರಕರಣದ ವಿರುದ್ದ ಹೋರಾಡಿದ ಅರಗ ಜ್ಞಾನೇಂದ್ರರು ಗೃಹಸಚಿವರು. ಈಗಲಾದರೂ ನ್ಯಾಯ ಒದಗಿಸಿ. ಮೈಸೂರಿನಲ್ಲಿ ಅತ್ಯಾಚಾರದ ವಿರುದ್ದ ಹೋರಾಟ ನಡೆಸಲು ಶೋಭ ಕರಂದ್ಲಾಜೆಗೆ ಬಿಡುವಿಲ್ಲವೇ? ಎಂದು ಕಿಡಿಕಾರಿದರು.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ರಾಜ್ಯದಲ್ಲಿಯೂ ತಟ್ಟಿದ ಭಾರತ್ ಬಂದ್ ಬಿಸಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ತೀವ್ರ ಪ್ರತಿಭಟನೆ

ದೇಶಾದ್ಯಂತ ಬುಗಿಲೆದ್ದ ರೈತರ ಆಕ್ರೋಶ: ವಿವಿಧ ಹೆದ್ದಾರಿ ತಡೆದು ತೀವ್ರ ಪ್ರತಿಭಟನೆ

ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ | ವಾರ್ಡ್ ಬಾಯ್ ಅರೆಸ್ಟ್

ಸಿಎಂ ಬೊಮ್ಮಾಯಿ ಬೆಂಗಾವಲು ವಾಹನ ಕಂಡು ಗಾಬರಿಯಿಂದ ಸ್ಕೂಟಿಯಿಂದ ಬಿದ್ದ ಮಹಿಳೆ!

ದಲಿತ ಮಕ್ಕಳ ಊಟದ ತಟ್ಟೆಯನ್ನು ಇತರ ಮಕ್ಕಳು ಮುಟ್ಟುತ್ತಿಲ್ಲ | ದೇವರಂತ ಮಕ್ಕಳ ಮೇಲೆಯೂ ಅಸ್ಪೃಶ್ಯತೆಯ ಕರಿನೆರಳು

ಕೊನೆಗೂ ಕೋರ್ಟ್ ನಲ್ಲಿ ಹೇಳಿಕೆ ದಾಖಲಿಸಿದ ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ

ಇತ್ತೀಚಿನ ಸುದ್ದಿ