ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಇ ಪಳನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ—ಎಐಎಡಿಎಂಕೆ ಹೋರಾಡಲಿದೆ: ಅಮಿತ್ ಶಾ - Mahanayaka

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಇ ಪಳನಿಸ್ವಾಮಿ ನೇತೃತ್ವದಲ್ಲಿ ಬಿಜೆಪಿ—ಎಐಎಡಿಎಂಕೆ ಹೋರಾಡಲಿದೆ: ಅಮಿತ್ ಶಾ

tamil nadu polls
11/04/2025

ಚೆನ್ನೈ: 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ಒಟ್ಟಾಗಿ ಮತ್ತು ಇ ಪಳನಿಸ್ವಾಮಿ ನೇತೃತ್ವದಲ್ಲಿ ಹೋರಾಡಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.


Provided by

ಎಐಎಡಿಎಂಕೆ ಮುಖ್ಯಸ್ಥ ಇ ಪಳನಿಸ್ವಾಮಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಶಾ, ಈ ಚುನಾವಣೆಯನ್ನು ರಾಷ್ಟ್ರೀಯವಾಗಿ ನರೇಂದ್ರ ಮೋದಿ ಮತ್ತು ತಮಿಳುನಾಡಿನಲ್ಲಿ ಇಪಿಎಸ್ ಮತ್ತು ಎಐಎಡಿಎಂಕೆ ಮುನ್ನಡೆಸಲಿವೆ ಎಂದು ಹೇಳಿದರು.

ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ದೃಢಪಡಿಸಿದ ಕೆಲವೇ ಗಂಟೆಗಳ ನಂತರ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿ ಖಚಿತವಾಯಿತು. ಬಳಿಕ ಈ ಜಂಟಿ ಸುದ್ದಿಗೋಷ್ಠಿ ನಡೆಯಿತು.


Provided by

1998 ರಿಂದ ಎಐಎಡಿಎಂಕೆ ಎನ್‌ ಡಿಎಯ ಭಾಗವಾಗಿದೆ ಮತ್ತು ಪ್ರಧಾನಿ ಮೋದಿ ಮತ್ತು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಹಿಂದೆ ಒಟ್ಟಿಗೆ ಕೆಲಸ ಮಾಡಿದ್ದಾರೆ. ನಮ್ಮ ಮೈತ್ರಿಕೂಟವು ಹೆಚ್ಚು ಬಲಿಷ್ಠವಾಗಿದೆ, ಎನ್‌ ಡಿಎ ಪ್ರಮುಖ ಗೆಲುವು ಸಾಧಿಸುತ್ತದೆ ಮತ್ತು ತಮಿಳುನಾಡಿನಲ್ಲಿ ಎನ್‌ಡಿಎ ಸರ್ಕಾರ ರಚನೆಯಾಗುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ಅಮಿತ್ ಶಾ ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ