ಬಿಜೆಪಿ ಅಧಿಕಾರಕ್ಕೇರಿದ ಬಳಿಕ  ಜನತೆಯ ಬದುಕನ್ನು ಸರ್ವ ನಾಶ ಮಾಡುತ್ತಿದೆ | ಜೆ.ಬಾಲಕೃಷ್ಣ - Mahanayaka
8:13 AM Friday 20 - September 2024

ಬಿಜೆಪಿ ಅಧಿಕಾರಕ್ಕೇರಿದ ಬಳಿಕ  ಜನತೆಯ ಬದುಕನ್ನು ಸರ್ವ ನಾಶ ಮಾಡುತ್ತಿದೆ | ಜೆ.ಬಾಲಕೃಷ್ಣ

04/03/2021

ಮಂಗಳೂರು: ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ಖಂಡಿಸಿ ಹಾಗೂ ನರೇಂದ್ರ ಮೋದಿ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ CPIM ನೇತ್ರತ್ವದಲ್ಲಿ ಮಂಗಳೂರು ನಗರದ ಮಿನಿ ವಿಧಾನಸೌಧದ ಎದುರು ಬುಧವಾರ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಜೆ.ಬಾಲಕೃಷ್ಣ ಶೆಟ್ಟಿ ಮಾತನಾಡಿ, ದೇಶವನ್ನು ದೀರ್ಘಕಾಲ ಆಳಿದ ಕಾಂಗ್ರೆಸ್ ಸರಕಾರದ ತಪ್ಪು ಆರ್ಥಿಕ ನೀತಿಗಳ ವಿರುದ್ದ ಭುಗಿಲೆದ್ದ ಜನತೆಯ ಆಕ್ರೋಶವನ್ನು ಬಂಡವಾಳವನ್ನಾಗಿಸಿದ ಬಿಜೆಪಿ ಅಧಿಕಾರಕ್ಕೇರಿದ ಬಳಿಕ ಅದೇ ನೀತಿಗಳನ್ನು ಜಾರಿಗೊಳಿಸಿ ದೇಶದ ಆರ್ಥಿಕತೆಯನ್ನೇ ನಾಶಪಡಿಸುತ್ತಿದೆ.ಜನತೆಯ ಬದುಕನ್ನು ಸರ್ವ ನಾಶ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ CPIM ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ , ಅಂದು ಬೆಲೆಯೇರಿಕೆಯ ವಿರುದ್ದ ಪ್ರತಿಭಟನೆಯ ನಾಟಕವಾಡಿದ ಸಂಸದ ನಳಿನ್ ಕುಮಾರ್ ಕಟೀಲು ಸೇರಿದಂತೆ ಬಿಜೆಪಿಯ ಎಲ್ಲಾ ನಾಯಕರು ಇಂದು ಬಾಯಿ ಬಿಡುತ್ತಿಲ್ಲ.ಇಡೀ ದೇಶದ ಸಂಪತ್ತನ್ನು ಅಂಬಾನಿ ಅಧಾನಿಗಳಿಗೆ ಧಾರೆ ಎರೆದು ಕೊಡುವ ಮೂಲಕ ನರೇಂದ್ರ ಮೋದಿ ಸರಕಾರ ಅವರ ಸಾಮ್ರಾಜ್ಯವನ್ನು ವಿಸ್ತರಿಸಲು ಸಹಕರಿಸುತ್ತಿದೆ.ಅಚ್ಚೇದಿನ್ ಬಂದಿರುವುದು ಅಧಾನಿ ಅಂಬಾನಿಗಳಿಗೆ ಹೊರತು ದೇಶದ ಸಾಮಾನ್ಯ ಜನತೆಗಲ್ಲ ಎಂದು ಸಾಬೀತಾಗಿದೆ ಎಂದು ಹೇಳಿದರು.


Provided by

CPIM ಮಂಗಳೂರು ನಗರ ಉತ್ತರ ಕಾರ್ಯದರ್ಶಿ ದಯಾನಂದ ಶೆಟ್ಟಿಯವರು ಮಾತನಾಡುತ್ತಾ, ಧರ್ಮ ದೇವರುಗಳ ಹೆಸರಿನಲ್ಲಿ ರಾಜಕೀಯ ಮಾಡುತ್ತಾ, ಮಾಧ್ಯಮಗಳನ್ನು ತನ್ನ ಕಪಿಮುಷ್ಠಿಯಲ್ಲಿಟ್ಟು ಹಸಿ ಹಸಿ ಸುಳ್ಳುಗಳನ್ನು ಹೇಳುತ್ತಾ ದೇಶದ ಜನರನ್ನು ದಾರಿ ತಪ್ಪಿಸುತ್ತಿರುವ ಫ್ಯಾಸಿಸ್ಟ್ ಸರಕಾರದ ಅಪಾಯಕಾರಿ ನೀತಿಗಳನ್ನು ಜನತೆ ಅರಿಯಬೇಕಾಗಿದೆ  ಎಂದು ಹೇಳಿದರು.

ಪ್ರತಿಭಟನೆಯಲ್ಲಿ CPIM ಮಂಗಳೂರು ನಗರ ಮುಖಂಡರಾದ ಸಂತೋಷ್ ಬಜಾಲ್, ಜಯಂತಿ ಶೆಟ್ಟಿ, ಬಾಬು ದೇವಾಡಿಗ,ದಿನೇಶ್ ಶೆಟ್ಟಿ, ಬಶೀರ್ ಪಂಜಿಮೊಗರು, ರಾಜೇಶ್ ಉರ್ವಾಸ್ಟೋರ್, CITU ನಾಯಕರಾದ ಭಾರತಿ ಬೋಳಾರ,ಮಹಮ್ಮದ್ ಮುಸ್ತಾಫ,ಸಂತೋಷ್ ಆರ್ ಎಸ್,ಉಮೇಶ್ ಶಕ್ತಿನಗರ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ