ಬಾಂಬ್ ಬೆದರಿಕೆ ಹಿನ್ನೆಲೆ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ; 1 ವಾರದಲ್ಲಿ ಬಂದ 35 ಹುಸಿ ಕರೆಗಳು! - Mahanayaka
12:14 PM Saturday 19 - October 2024

ಬಾಂಬ್ ಬೆದರಿಕೆ ಹಿನ್ನೆಲೆ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ; 1 ವಾರದಲ್ಲಿ ಬಂದ 35 ಹುಸಿ ಕರೆಗಳು!

19/10/2024

ದುಬೈ-ಜೈಪುರ ಏರ್ ಇಂಡಿಯಾ ವಿಮಾನವು ಬಾಂಬ್ ಬೆದರಿಕೆಯಿಂದಾಗಿ ಶನಿವಾರ ಮುಂಜಾನೆ ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ ಘಟನೆ ನಡೆಯಿತು.

189 ಪ್ರಯಾಣಿಕರನ್ನು ಹೊತ್ತ ವಿಮಾನವು ಬೆಳಿಗ್ಗೆ 1:20 ಕ್ಕೆ ಸುರಕ್ಷಿತವಾಗಿ ಇಳಿಯಿತು. ಅಧಿಕಾರಿಗಳು ತಕ್ಷಣವೇ ಪರಿಸ್ಥಿತಿಗೆ ಸ್ಪಂದಿಸಿ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿ ವಿಮಾನದ ಬಗ್ಗೆ ಸಮಗ್ರ ಶೋಧ ನಡೆಸಿದರು. ತೀವ್ರ ತಪಾಸಣೆಯ ನಂತರ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಮತ್ತು ಬೆದರಿಕೆಯನ್ನು ಸುಳ್ಳು ಎಂದು ಖಚಿತಪಡಿಸಿದರು.

ಕೇವಲ 24 ಗಂಟೆಗಳ ಅವಧಿಯಲ್ಲಿ ಮೂರು ವಿಮಾನಗಳಿಗೆ ಬಾಂಬ್ ಬೆದರಿಕೆಗಳಿಂದ ಹಾಕಿ ಎಚ್ಚರಿಕೆಯನ್ನು ನೀಡಲಾಯಿತು. ಬೆದರಿಕೆ ಹಾಕಿದ ವಿಮಾನಗಳಲ್ಲಿ ವಿಸ್ತಾರಾ ಲಂಡನ್ ವಿಮಾನ (ಯುಕೆ 17), ಜೈಪುರ-ದುಬೈ ಮಾರ್ಗದಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ (ಐಎಕ್ಸ್ 196) ಮತ್ತು ಬೆಂಗಳೂರಿನಿಂದ ಮುಂಬೈಗೆ ತೆರಳಬೇಕಿದ್ದ ಆಕಾಶ ಏರ್ ವಿಮಾನ (ಕ್ಯೂಪಿ 1366) ಸೇರಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಬೆದರಿಕೆ ಸ್ವೀಕರಿಸಿದ ನಂತರ ವಿಸ್ತಾರಾ ವಿಮಾನವನ್ನು ಜರ್ಮನಿಯ ಫ್ರಾಂಕ್ಫರ್ಟ್ ಗೆ ತಿರುಗಿಸಲಾಯಿತು. ಅಲ್ಲಿ ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಯಾವುದೇ ಭದ್ರತಾ ಅಪಾಯಗಳಿಂದ ಮುಕ್ತವಾದ ನಂತರ ಅದು ಲಂಡನ್ ಗೆ ತನ್ನ ಪ್ರಯಾಣವನ್ನು ಮುಂದುವರಿಸಿತು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ