ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವ ಈಗ ಪೊಲೀಸರ ವಶದಲ್ಲಿ: ಪೊಲೀಸರೆದು ಕಣ್ಣೀರಿಟ್ಟು ಆರೋಪಿ ಹೇಳಿದ್ದೇನು? - Mahanayaka

ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವ ಈಗ ಪೊಲೀಸರ ವಶದಲ್ಲಿ: ಪೊಲೀಸರೆದು ಕಣ್ಣೀರಿಟ್ಟು ಆರೋಪಿ ಹೇಳಿದ್ದೇನು?

madhu soodan
22/09/2021


Provided by

ಬೆಂಗಳೂರು: ಬಸ್ಸಿನಲ್ಲಿ ಯುವತಿಗೆ ಮುತ್ತು ನೀಡಿ ಎಸ್ಕೇಪ್ ಆಗಿದ್ದ ಯುವಕನನ್ನು  ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇದೀಗ ಆರೋಪಿಯು ಪೊಲೀಸ್ ವಶದಲ್ಲಿದ್ದಾನೆ.

ಮಧುಸೂದನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಪೊಲೀಸರ ವಿಚಾರಣೆಯ ಸಂದರ್ಭದಲ್ಲಿ ಆತ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಸೆ.13ರಂದು ಬಳ್ಳಾರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ನಿದ್ರೆಗೆ ಜಾರಿದ್ದ ವಿದ್ಯಾರ್ಥಿನಿಗೆ ಮುತ್ತಿಟ್ಟು ಮಧುಸೂದನ್ ಪರಾರಿಯಾಗಿದ್ದ. ಈ ಘಟನೆ ಸಂಬಂಧ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣ ಬಳಿಕ ಬಾಗಲಗುಂಟೆ ಠಾಣೆಗೆ ವರ್ಗಾವಣೆಗೊಂಡಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಪೊಲೀಸರೆದುರು ಕಣ್ಣೀರು ಹಾಕಿದ ಯುವಕ, ಸಿನಿಮಾ ಸ್ಟೈಲ್ ನಲ್ಲಿ ಮುತ್ತುಕೊಟ್ಟು ತಪ್ಪು ಮಾಡಿದೆ ಎಂದು ಹೇಳಿದ್ದಾನೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಉಂಡು ಮಲಗಿದರೂ ಮುಗಿಯಲಿಲ್ಲ ಗಂಡ ಹೆಂಡಿರ ಜಗಳ: ಪೊಲೀಸ್ ಠಾಣೆ ಎದುರು ಹಿಗ್ಗಾಮುಗ್ಗಾ ಥಳಿತ!

ರೇಣುಕಾಚಾರ್ಯ, ಕಾರಜೋಳ ಚಿರತೆ ಹಿಡಿಯುವುದರಲ್ಲಿ ಎಕ್ಸಪರ್ಟ್ ಗಳು | ಸದನದಲ್ಲಿ ಸ್ವಾರಸ್ಯಕರ ಚರ್ಚೆ

“ನನ್ನ ಪಂಚೆ ಕಳಚ್ಕೊಂಡಿದೆ, ಈಶ್ವರಪ್ಪ…” | ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದ ಸಿದ್ದರಾಮಯ್ಯ

ಬೆಂಗಳೂರು: ಅಪಾರ್ಟ್​ಮೆಂಟ್ ಅಗ್ನಿ ಅವಘಡ ಪ್ರಕರಣಕ್ಕೆ ಹೊಸ ತಿರುವು: ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿಲ್ಲ!

ಕೊಪ್ಪಳದಲ್ಲಿ ಅಸ್ಪೃಶ್ಯತಾ ಆಚರಣೆ ಪ್ರಕರಣ: ಐವರು ಕಿಡಿಗೇಡಿಗಳ ಅರೆಸ್ಟ್

ಯುವತಿಯೊಂದಿಗಿನ ಫೋಟೋ ಲೀಕ್ ಆಗುವ ಭೀತಿಯಿಂದ ಸ್ವಾಮೀಜಿ ಆತ್ಮಹತ್ಯೆ? | ಡೆತ್ ನೋಟ್ ನಲ್ಲಿ ಏನಿತ್ತು ಗೊತ್ತಾ?

ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ? | ಆಸ್ಕರ್ ಫೆರ್ನಾಂಡಿಸ್ ಸ್ಥಾನ ತುಂಬುತ್ತಾರಾ?

ಇತ್ತೀಚಿನ ಸುದ್ದಿ