ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಇಬ್ಬರು ದುರ್ಮರಣ - Mahanayaka

ಚಲಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಇಬ್ಬರು ದುರ್ಮರಣ

ramanagara
25/04/2022

ರಾಮನಗರ ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪರಿಣಾಮ ಸ್ಥಳದಲ್ಲೇ  ಇಬ್ಬರು ದುರ್ಮರಣಕ್ಕೀಡಾದ ಘಟನೆ ರಾಮನಗರದ ಕುಂಭಾಪುರ ಗೇಟ್ ಬಳಿ  ನಡೆದಿದೆ.

ಸೋಮವಾರ ಬೆಳಗ್ಗೆ ಒಂದೇ ಕುಟುಂಬದ ಐವರು ಬೆಂಗಳೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ಬಳಿಯ ಅಗಸನ ಪುರಕ್ಕೆ ಹಬ್ಬಕ್ಕೆಂದು ಹೋಗಿ  ವಾಪಸ್ ಬೆಂಗಳೂರಿಗೆ ಒಮಿನಿ ಕಾರಿನಲ್ಲಿ ತೆರಳುತ್ತಿದ್ದಾಗ ಮಾರ್ಗಮಧ್ಯೆ ಕಾರಿನ ಮೇಲೆ ಮರ ಬಿದ್ದಿದೆ.

ಮರ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸುಂದ್ರಶ್ (49) ಮತ್ತು ತನ್ಮಯ್ (9) ಮೃತಪಟ್ಟವರು. ಶೀಲ, ಗಾನವಿ, ಸಾನವಿ ಎಂಬವರು  ಗಂಭೀರ ಗಾಯಗೊಂಡಿದ್ದಾರೆ. ಕೆಲಕಾಲ ಬೆಂಗಳೂರು ಮೈಸೂರು ಹೆದ್ದಾರಿ ಬಂದ್ ಆಗಿತ್ತು. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾಡ್ಗಿಚ್ಚಿನಿಂದ ಹೊತ್ತಿ ಉರಿಯುತ್ತಿರುವ ಅಮೆರಿಕ, ತುರ್ತುಪರಿಸ್ಥಿತಿ ಘೋಷಣೆ !

ಪ್ರೆಶರ್ ಕುಕ್ಕರ್ ಸ್ಫೋಟ: ಯುವಕ ದಾರುಣ ಸಾವು

ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲೇ ಸಾವು

ಮಹತ್ವ ಕಳೆದುಕೊಂಡ ನಿಷೇಧ ಅಭಿಯಾನಗಳು:  ಕೆಲವರ ಪ್ರಚಾರಕ್ಕಾಗಿ ನಡೆಯಿತೇ ನಿಷೇಧ ಅಭಿಯಾನ?

ಅಕ್ರಮ ತೈಲ ಸಂಸ್ಕರಣಾಗಾರ  ಸ್ಫೋಟ: 100ಕ್ಕೂ ಅಧಿಕ ಮಂದಿ ಸಾವು

 

 

ಇತ್ತೀಚಿನ ಸುದ್ದಿ