ಹೋರಾಟಕ್ಕೆ ಜಯ? ಪ್ರತಿಭಟನಾ ನಿರತ ರೈತರ ಜತೆ ಮಾತುಕತೆಗೆ ಕೇಂದ್ರ ಸರ್ಕಾರ ಒಪ್ಪಿಗೆ - Mahanayaka

ಹೋರಾಟಕ್ಕೆ ಜಯ? ಪ್ರತಿಭಟನಾ ನಿರತ ರೈತರ ಜತೆ ಮಾತುಕತೆಗೆ ಕೇಂದ್ರ ಸರ್ಕಾರ ಒಪ್ಪಿಗೆ

19/01/2025

ಬೆಳೆಗಳಿಗೆ ಎಂಎಸ್ ಪಿ ಕುರಿತು ಕಾನೂನು ಖಾತರಿ ನೀಡುವ ಬೇಡಿಕೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಫೆಬ್ರವರಿ 14 ರಂದು ಚಂಡೀಗಢದಲ್ಲಿ ಪಂಜಾಬ್ ನ ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಲು ಸಜ್ಜಾಗಿದೆ.

ಉದ್ದೇಶಿತ ಸಭೆಯ ಘೋಷಣೆಯ ನಂತರ, ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಆಮರಣಾಂತ ಉಪವಾಸ ಶನಿವಾರ 54 ನೇ ದಿನಕ್ಕೆ ಕಾಲಿಟ್ಟಿದ್ದು, ವೈದ್ಯಕೀಯ ಸಹಾಯವನ್ನು ಸ್ವೀಕರಿಸಲು ಒಪ್ಪಿಕೊಂಡರು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಬಗ್ಗೆ ಕಾನೂನು ಖಾತರಿ ನೀಡುವವರೆಗೂ ಅವರು ಅನಿರ್ದಿಷ್ಟ ಉಪವಾಸವನ್ನು ಮುಂದುವರಿಸಲಿದ್ದಾರೆ ಎಂದು ರೈತ ಮುಖಂಡ ಸುಖ್ಜಿತ್ ಸಿಂಗ್ ಹರ್ದೋಖಂಡೆ ಹೇಳಿದ್ದಾರೆ.
ತದನಂತರ, ದಲ್ಲೆವಾಲ್ ಅವರು ಇಂಟ್ರಾವೆನಸ್ ಡ್ರಿಪ್ನೊಂದಿಗೆ ವೈದ್ಯಕೀಯ ನೆರವು ಪಡೆಯುತ್ತಿರುವ ಫೋಟೋಗಳನ್ನು ರೈತರು ಹಂಚಿಕೊಂಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ