ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬ್ಬ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ನೀಡುತ್ತೇವೆ | ಸಿದ್ದರಾಮಯ್ಯ ಘೋಷಣೆ - Mahanayaka
9:53 PM Thursday 19 - September 2024

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಬ್ಬ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ನೀಡುತ್ತೇವೆ | ಸಿದ್ದರಾಮಯ್ಯ ಘೋಷಣೆ

15/02/2021

ಮಂಡ್ಯ: ಮುಂದಿನ ಬಾರಿ ಕಾಂಗ್ರೆಸ್ ನ್ನು ಅಧಿಕಾರಕ್ಕೆ ತಂದರೆ, ಒಬ್ಬರಿಗೆ 10 ಕೆ.ಜಿ. ಅಕ್ಕಿಯನ್ನು ನೀಡುತ್ತೇನೆ. ಅದೆಷ್ಟು   ಖರ್ಚಾದರೂ ಪರವಾಗಿಲ್ಲ. 10 ಕೆ.ಜಿ. ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಒಬ್ಬ ವ್ಯಕ್ತಿಗೆ 7 ಕೆ.ಜಿ. ಅಕ್ಕಿ ನೀಡುತ್ತಿದ್ದೆ. ಆದರೆ ಸಿಎಂ ಯಡಿಯೂರಪ್ಪ ಅದನ್ನು 5 ಕೆ.ಜಿ.ಗೆ ಇಳಿಸಿದ್ದಾನೆ. ಮುಂದಿನ ದಿನಗಳಲ್ಲಿ 3 ಕೆ.ಜಿ.ಗೆ ಇಳಿಸ್ತಾನೆ. ನಂತರ ನಿಲ್ಲಿಸುತ್ತಾನೆ ಎಂದು ಯಡಿಯೂರಪ್ಪ ವಿರುದ್ಧ ಏಕವಚನದಲ್ಲಿಯೇ ವ್ಯಂಗ್ಯವಾಡಿದರು.

ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ಬರಲೇ ಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಒಬ್ಬರಿಗೆ 10 ಕೆ.ಜಿ. ಅಕ್ಕಿಯನ್ನು ನಾವು ಕೊಡುತ್ತೇವೆ, ಎಷ್ಟೇ ಖರ್ಚಾದರೂ ಕೊಡುತ್ತೇವೆ ಎಂದು ಅವರು ಘೋಷಿಸಿದರು.


Provided by

ಇತ್ತೀಚಿನ ಸುದ್ದಿ