ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣ ಎಂದು ಸ್ಟೇಟಸ್ ಹಾಕಿ ಕಾಂಗ್ರೆಸ್ ಸದಸ್ಯೆ ಆತ್ಮಹತ್ಯೆಗೆ ಯತ್ನ! - Mahanayaka
4:10 AM Thursday 19 - September 2024

ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣ ಎಂದು ಸ್ಟೇಟಸ್ ಹಾಕಿ ಕಾಂಗ್ರೆಸ್ ಸದಸ್ಯೆ ಆತ್ಮಹತ್ಯೆಗೆ ಯತ್ನ!

suicide
13/11/2021

ಚಿಕ್ಕಮಗಳೂರು: ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣವೆಂದು ಸ್ಟೇಟಸ್ ಹಾಕಿ ಪಟ್ಟಣ ಪಂಚಾಯತ್ ಕಾಂಗ್ರೆಸ್ ಸದಸ್ಯೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎನ್.ಆರ್.ಪುರ ತಾಲೂಕಿನ ಪಟ್ಟಣ ಪಂಚಾಯತ್ ಸದಸ್ಯೆ ಜುಬೇದಾ  ಆತ್ಮಹತ್ಯೆಗೆ ಯತ್ನಿಸಿರುವವರಾಗಿದ್ದು, 5—6 ಬಗೆಯ  ನಿದ್ರೆ ಮಾತ್ರಗಳನ್ನು ಸೇವಿಸಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆನ್ನಲಾಗಿದೆ. ಸದ್ಯ ಅವರನ್ನು ಎನ್.ಆರ್.ಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಹಿಂದಿನ ಅಧ್ಯಕ್ಷೆ ಸುರಯ್ಯಾ ಭಾನು ಅವರ ಅಧ್ಯಕ್ಷೆ ಅವಧಿ ಮುಗಿದರೂ ಅವರು ಸ್ಥಾನ ಬಿಟ್ಟುಕೊಟ್ಟಿಲ್ಲ ಎನ್ನಲಾಗಿದೆ. ಅಧ್ಯಕ್ಷೆ ಸ್ಥಾನ ಬಿಟ್ಟು ಕೊಡಲು ಮೀನಾ ಮೇಷ ಎಣಿಸುತ್ತಿರುವ ನಡುವೆಯೇ ಸುರಯ್ಯಾ ಭಾನು ರಾಜೀನಾಮೆ ವಿಚಾರವಾಗಿ ಪಕ್ಷದೊಳಗೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಈ ಎಲ್ಲ ಬೆಳವಣಿಗೆಗಳಿಂದ ನೊಂದು ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಲೈಂಗಿಕ ಕಿರುಕುಳ ಆರೋಪದಿಂದ ನೊಂದು ಖಿನ್ನತೆಗೆ ಜಾರಿದ್ದ ವ್ಯಕ್ತಿ ಸಾವು!

ಪ್ಲೈಓವರ್ ನಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನ ಡಿಕ್ಕಿ: ಇಬ್ಬರು ಯುವಕರ ದಾರುಣ ಸಾವು

ಆಟೋ ಚಾಲಕನನ್ನು ಶೌಚಾಲಯಕ್ಕೆ ಎಳೆದೊಯ್ದು ವಿವಸ್ತ್ರಗೊಳಿಸಿ ವೈದ್ಯರ ತಂಡದಿಂದ ಹೇಯ ಕೃತ್ಯ!

ಲಖಿಂಪುರ ಖೇರಿ ಹಿಂಸಾಚಾರ ಬಿಜೆಪಿಗೆ ಹಾನಿಯುಂಟು ಮಾಡಬಹುದು | ಸಮೀಕ್ಷೆ

ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವುದು ಯಾವಾಗ? | ಹುತಾತ್ಮ ವೀರರ ತ್ಯಾಗಕ್ಕೆ ಘೋರ ಅವಮಾನ

ಇತ್ತೀಚಿನ ಸುದ್ದಿ