ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ವರ್ಗಾವಣೆಗೆ ಒತ್ತಾಯಿಸಿ ಸಿಪಿಐಎಂ ಪ್ರತಿಭಟನೆ - Mahanayaka
1:07 PM Wednesday 5 - February 2025

ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ವರ್ಗಾವಣೆಗೆ ಒತ್ತಾಯಿಸಿ ಸಿಪಿಐಎಂ ಪ್ರತಿಭಟನೆ

cpm protest
04/12/2024

ಮಂಗಳೂರು: ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ವರ್ಗಾವಣೆ ಒತ್ತಾಯಿಸಿ- ಉಡುಪಿಯಲ್ಲಿ ಸಿಪಿಐಎಂ ಪಕ್ಷ ಮತ್ತು ಸಮಾನಮನಸ್ಕ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಧರಣಿಗಳಿಗೆ ಅನುಮತಿ ನಿರಾಕರಣೆ ಮಾಡುವುದು, ಸಿಪಿಐಎಂ  16 ಜನ  ಮುಖಂಡರ ಮೇಲೆ ಹಾಗೂ ಜನಪರ ಸಂಘಟನೆಯ ಮುಖಂಡರ ಮೇಲೆ ಮೊಕದ್ದಮೆ ಹೂಡುವುದು, ಸಂವಿಧಾನದ ಹಕ್ಕುಗಳನ್ನು ದಮನಿಸಲು ಹೊರಟ, ಬಿ.ಜೆ.ಪಿ. ಸಂಘಪರಿವಾರದ ಬೆಂಗಾವಲಾಗಿ ನಿಂತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ವರ್ಗಾವಣೆ ಮಾಡಲು ಪ್ರತಿಭಟನಾಕಾರರು ಒತ್ತಾಯಿಸಿದರು.

ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಕೂಡಲೇ ಸಿಪಿಐಎಂ ಮುಖಂಡರ ಮೇಲೆ ಹಾಕಿರುವ ಕೇಸನ್ನು ವಾಪಾಸು ಪಡೆಯಬೇಕು, ಅಕ್ರಮ ಮರಳುಗಾರಿಕೆ, ಬೆಟ್ಟಿಂಗ್, ಮಸಾಜ್ ಪಾರ್ಲರ್ ದಂಧೆಕೋರರನ್ನು ಬಂಧುಗಳಂತೆ ನೋಡುವ ಮಂಗಳೂರು ಪೋಲಿಸ್ ಕಮಿಷನರ್ ಅನುಪಮ್ ಅಗರವಾಲ್ ಅವರನ್ನು ಕೂಡಲೇ  ತನಿಖೆಗೆ ಒಳಪಡಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ತೀವ್ರ ವಾದ ಹೋರಾಟ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದರು.

ಪ್ರತಿಭಟನೆಯಲ್ಲಿ ಸಿಪಿಐಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಉಡುಪಿ ವಲಯ ಕಾರ್ಯದರ್ಶಿ ಶಶಿಧರ ಗೋಲ್ಲ, ಜಿಲ್ಲಾ ಸಮಿತಿ ಸದಸ್ಯರಾದ ಕವಿರಾಜ್,  ಎಸ್.ಕಾಂಚನ್, ವೆಂಕಟೇಶ್ ಕೋಣಿ , ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಸಂಚಾಲಕರಾದ ಸಂಜೀವ ಬಳ್ಕೂರ್, ಡಿ.ಎಸ್.ಎಸ್. ಸಂಘಟನೆಯ ರಾಜ್ಯ ಸಂಚಾಲಕರಾದ ಸುಂದರ್ ಮಾಸ್ತರ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮುಖಂಡರಾದ ಇದ್ರೀಸ್ ಹೂಡೆ, ಅಜೀಜ್ ಉದ್ಯಾವರ, ನಾಸೀರ್ ಕಾಪು, ಸಮಾನ ಮನಸ್ಕ ಸಂಘಟನೆ ಮುಖಂಡರಾದ ಕ್ರಷ್ಣ,ಸಂವರ್ಥ ಸಾಹಿಲ್, ದಯಾನಂದ ಕೋಟ್ಯಾನ್, ಸಿಪಿಐಎಂ ಮುಖಂಡರಾದ ನಳಿನಿ.ಎಸ್, ಸೈಯಾದ್ ಅಲಿ, ರಮೇಶ್‌ ಉಡುಪಿ, ಮೋಹನ್, ಸದಾಶಿವ ಪೂಜಾರಿ, ಮುರಳಿ, ರಮೇಶ್ ಶೇರಿಗಾರ ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ