ಒಂದು ರಾಷ್ಟ್ರ, ಒಂದು ಚುನಾವಣೆ: ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಬಿಜೆಪಿ ಪ್ಲಾನ್ ಎಂದ ಚಿದಂಬರಂ - Mahanayaka
5:12 PM Saturday 21 - September 2024

ಒಂದು ರಾಷ್ಟ್ರ, ಒಂದು ಚುನಾವಣೆ: ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಬಿಜೆಪಿ ಪ್ಲಾನ್ ಎಂದ ಚಿದಂಬರಂ

17/09/2023

ಕೇಂದ್ರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ನಡೆ ಕುರಿತು ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ‌ ಪಿ. ಚಿದಂಬರಂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದು ಸಂವಿಧಾನದ ಮೇಲಿನ ದಾಳಿಯಾಗಿದೆ. ನಾವು ಅದನ್ನು ತಿರಸ್ಕರಿಸುತ್ತೇವೆ. ಇದು ಒಕ್ಕೂಟದ ಮೇಲಿನ ದಾಳಿ. ಇದಕ್ಕೆ ಕನಿಷ್ಠ ಐದು ಸಾಂವಿಧಾನಿಕ ತಿದ್ದುಪಡಿಗಳ ಅಗತ್ಯವಿದೆ. ಈ ಸಂವಿಧಾನ ತಿದ್ದುಪಡಿಗಳನ್ನು ಅಂಗೀಕರಿಸಲು ಬಿಜೆಪಿಗೆ ಸಂಖ್ಯಾಬಲವಿಲ್ಲ ಎಂದು ತಿಳಿದಿದೆ. ಆದರೂ ಒಂದು ರಾಷ್ಟ್ರ, ಒಂದು ಚುನಾವಣೆ ಎಂಬ ಮರೀಚಿಕೆಯನ್ನು ಮುಂದಿಟ್ಟಿದ್ದು, ಈಗಿನ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ತಿರುಗಿಸಲು ಮತ್ತು ಸುಳ್ಳು ನಿರೂಪಣೆಯನ್ನು ಸೃಷ್ಟಿಸಲು ಮಾತ್ರ ಎಂದು ಹೇಳಿದ್ದಾರೆ.

ಇನ್ನು ಹೈದ್ರಾಬಾದ್ ನಲ್ಲಿ ನಡೆದ ಸಿಡಬ್ಲ್ಯುಸಿ ಸಭೆಯಲ್ಲಿ ಸನಾತನ ಧರ್ಮದ ವಿವಾದದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಚಿದಂಬರಂ ಹೇಳಿದ್ದಾರೆ. ಸನಾತನ ಧರ್ಮದ ಬಗ್ಗೆ ಯಾವುದೇ ವಿವಾದಕ್ಕೆ ಸಿಲುಕಲು ಕಾಂಗ್ರೆಸ್ ಸಿದ್ಧವಿಲ್ಲ. ನಾವು ಎಲ್ಲಾ ಧರ್ಮಗಳಿಗೂ ಸಮಾನ ಗೌರವವನ್ನು ಕಾಯ್ದುಕೊಂಡಿದ್ದೇವೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ದೇಶದ ಸಾಂವಿಧಾನಿಕ ಮತ್ತು ಒಕ್ಕೂಟ ರಚನೆಗೆ ಸವಾಲು ಇದೆ ಎಂದು ನಾವು ನಂಬುತ್ತೇವೆ. ಫೆಡರಲಿಸಂ ಅನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸಲಾಗುತ್ತಿದೆ. ರಾಜ್ಯ ಸರ್ಕಾರಗಳಿಗೆ ಅಡ್ಡಿಪಡಿಸಲಾಗುತ್ತಿದೆ. ರಾಜ್ಯ ಸರ್ಕಾರಗಳಿಗೆ ಆದಾಯವನ್ನು ನಿರಾಕರಿಸಲಾಗಿದೆ. ರಾಜ್ಯ ಸರ್ಕಾರಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವ ರೀತಿಗೆ ಅಡೆತಡೆಗಳನ್ನು ಹಾಕಲಾಗಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.


Provided by

ಇತ್ತೀಚಿನ ಸುದ್ದಿ